ವಿರೋಧ ಪಕ್ಷಗಳ ʼಮೋದಿ ನಿರಂಕುಶ ನಾಯಕʼ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, ʼನಾನು ಮೋದಿ ಮತ್ತು ಅವರ ಕಾರ್ಯವೈಖರಿಯನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಅವರಂತೆತಾಳ್ಮೆಯಿಂದ ಕೇಳಿಸಿಕೊಳ್ಳುವವರನ್ನು ನಾನು ನೋಡಿಯೇ ಇಲ್ಲ. ಎಂತಹದೇ ವಿಚಾರವಿರಲಿ, ಅವರು ಪ್ರತಿಯೊಬ್ಬರ ಮಾತುಗಳನ್ನು ತಾಳ್ಮೆಯಿಂದ ಆಲಿಸುತ್ತಾರೆ ಮತ್ತು ಕೊನೆಯಲ್ಲಿ ಮಾತನಾಡುತ್ತಾರೆ. ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಸಣ್ಣ ಅಧಿಕಾರಿ ಸೇರಿದಂತೆ ಎಲ್ಲರೂ ನೀಡಿದ ಸಲಹೆಗಳನ್ನು ಪರಿಗಣಿಸಿ ತಾಳ್ಮೆಯಿಂದ ತೀರ್ಮಾನ ಕೈಗೊಳ್ಳುತ್ತಾರೆʼ ಎಂದು ವಿವರಿಸಿದ್ದಾರೆ.