ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಎಲ್ಲರ ಸಲಹೆ ಆಲಿಸುವ ಪ್ರಜಾಪ್ರಭುತ್ವ ನಾಯಕ: ಅಮಿತ್‌ ಶಾ

Last Updated 10 ಅಕ್ಟೋಬರ್ 2021, 13:40 IST
ಅಕ್ಷರ ಗಾತ್ರ

ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಜಾಪ್ರಭುತ್ವ ನಾಯಕ ಎಂದು ಹೊಗಳಿದ್ದಾರೆ. ಹಾಗೆಯೇ, ಕೇಂದ್ರ ಸಂಪುಟವುಮೋದಿ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವಂತೆ ಈ ಹಿಂದೆ ಎಂದೂ ಕಾರ್ಯಾಚರಿಸಿರಲಿಲ್ಲ ಎಂಬುದನ್ನು ಅವರ ವಿರೋಧಿಗಳೂ ಒಪ್ಪಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಸಂಸದ್‌ ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶಾ,ಮೋದಿ ಅವರು ತಮ್ಮ ಹುದ್ದೆ ಅಥವಾ ಸ್ಥಾನಮಾನವನ್ನು ಲೆಕ್ಕಿಸದೆ ಯಾರಾದರೂನೀಡುವ ಯೋಗ್ಯ ಸಲಹೆಗಳಿಗೆ ಪ್ರಾಮುಖ್ಯತೆ ನೀಡುತ್ತಾರೆ. ಅವರಂತಹ ತಾಳ್ಮೆಯ ಕೇಳುಗರನ್ನು ತಾವು ನೋಡಿಲ್ಲ ಎಂದಿದ್ದಾರೆ.

ಮುಂದುವರಿದು, ದೇಶದ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವಾಗ ರಾಜಕೀಯ ಸವಾಲುಗಳನ್ನು ಸ್ವೀಕರಿಸಲುಮೋದಿ ಹಿಂಜರಿಯುವುದಿಲ್ಲ.ಕೆಲವೊಮ್ಮೆ ರಾಷ್ಟ್ರದ ಹಿತಕ್ಕಾಗಿ ಕಹಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷಗಳ ʼಮೋದಿ ನಿರಂಕುಶ ನಾಯಕʼ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, ʼನಾನು ಮೋದಿ ಮತ್ತು ಅವರ ಕಾರ್ಯವೈಖರಿಯನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಅವರಂತೆತಾಳ್ಮೆಯಿಂದ ಕೇಳಿಸಿಕೊಳ್ಳುವವರನ್ನು ನಾನು ನೋಡಿಯೇ ಇಲ್ಲ. ಎಂತಹದೇ ವಿಚಾರವಿರಲಿ, ಅವರು ಪ್ರತಿಯೊಬ್ಬರ ಮಾತುಗಳನ್ನು ತಾಳ್ಮೆಯಿಂದ ಆಲಿಸುತ್ತಾರೆ ಮತ್ತು ಕೊನೆಯಲ್ಲಿ ಮಾತನಾಡುತ್ತಾರೆ. ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಸಣ್ಣ ಅಧಿಕಾರಿ ಸೇರಿದಂತೆ ಎಲ್ಲರೂ ನೀಡಿದ ಸಲಹೆಗಳನ್ನು ಪರಿಗಣಿಸಿ ತಾಳ್ಮೆಯಿಂದ ತೀರ್ಮಾನ ಕೈಗೊಳ್ಳುತ್ತಾರೆʼ ಎಂದು ವಿವರಿಸಿದ್ದಾರೆ.

ಮೋದಿ ಯಾವುದೇ ನಿರ್ಧಾರಗಳನ್ನು ಹೇರುವುದಿಲ್ಲ ಎಂದು ಒತ್ತಿ ಹೇಳಿರುವ ಶಾ, ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಂಪುಟವು ಪ್ರಜಾಸತ್ತಾತ್ಮಕವಾಗಿ ಕಾರ್ಯಾಚರಿಸುತ್ತಿರುವಂತೆ, ಹಿಂದೆಂದೂ ಇರಲಿಲ್ಲ ಎಂಬುದನ್ನು ಅವರೊಂದಿಗೆ ಕೆಲಸ ಮಾಡಿದವರು ಮತ್ತು ಅವರ ವಿರೋಧಿಗಳೂ ಒಪ್ಪಿಕೊಳ್ಳುತ್ತಾರೆʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರತಿ ಸಭೆಗಳಲ್ಲಿಸಾಮೂಹಿಕ ಸಮಾಲೋಚನೆನಡೆಸಿದ ನಂತರವೇ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಸರ್ಕಾರವನ್ನು ಮುನ್ನಡೆಸುವುದಕ್ಕೆ ಮಾತ್ರವಲ್ಲದೆ ದೇಶದಲ್ಲಿ ಉತ್ತಮ ಬದಲಾವಣೆಗಳನ್ನು ತರುವುದಕ್ಕಾಗಿ ಅಧಿಕಾರದಲ್ಲಿರುವುದಾಗಿ ಅವರು (ಮೋದಿ) ಯಾವಾಗಲೂ ಹೇಳುತ್ತಾರೆಎಂದೂತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT