ರಾಜ್ಯಗಳ ಸಂಸ್ಥಾಪನಾ ದಿನ: ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ನವದೆಹಲಿ: ಆಂಧ್ರಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಛತ್ತೀಸ್ಗಡ, ಕೇರಳ ಮತ್ತು ಹರಿಯಾಣ ರಾಜ್ಯಗಳ ಸಂಸ್ಥಾಪನಾ ದಿನವಾದ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳ ಜನತೆಗೆ ಶುಭಾಶಯ ಕೋರಿದ್ದಾರೆ.
ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಆರು ರಾಜ್ಯಗಳ ಜನತೆಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ.
ಕರ್ನಾಟಕ ಎಂದು ನಾಮಕರಣವಾದ ಈ ದಿನವನ್ನು ಕರ್ನಾಟಕ ರಾಜ್ಯೋತ್ಸವ ಎಂದು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ.
— Narendra Modi (@narendramodi) November 1, 2021
‘ಹೊಸತನ್ನು ಅರಸುವ ಜನರ ಉತ್ಸಾಹದಿಂದ ಕರ್ನಾಟಕವು ತನ್ನದೇ ಆದ ವಿಶೇಷ ಛಾಪು ಮೂಡಿಸಿದೆ. ಅತ್ಯುತ್ತಮ ಸಂಶೋಧನೆ ಮತ್ತು ಉದ್ಯಮದಲ್ಲಿ ರಾಜ್ಯವು ಮುಂದಿದೆ. ಮುಂದಿನ ದಿನಗಳಲ್ಲಿ ರಾಜ್ಯವು ಯಶಸ್ಸಿನ ಹೊಸ ಉತ್ತುಂಗಕ್ಕೇರಲಿ’ ಎಂದು ಅವರು ಬಣ್ಣಿಸಿದರು.
రాష్ట్ర అవతరణ దినోత్సవం సందర్భంగా ఆంధ్రప్రదేశ్ లోని నా సోదరీమణులకు, సోదరులకు శుభాకాంక్షలు. ఏపీ ప్రజలు తమ నైపుణ్యం, దృఢ సంకల్పం, పట్టుదలకు మారు పేరు. అందువల్ల వారు అనేక రంగాల్లో రాణిస్తున్నారు. ఏపీ ప్రజలు సంతోషంగా, ఆరోగ్యంగా, విజయవంతంగా ఉండాలని కోరుకుంటున్నాను.
— Narendra Modi (@narendramodi) November 1, 2021
‘ಆಂಧ್ರಪ್ರದೇಶದ ಸಹೋದರ–ಸಹೋದರಿಯರಿಗೆ ರಾಜ್ಯದ ಸಂಸ್ಥಾಪನಾ ದಿನದ ಶುಭಾಶಯಗಳು. ರಾಜ್ಯದ ಜನರು ತಮ್ಮ ಕೌಶಲ್ಯ ಮತ್ತು ದೃಢತೆಗೆ ಹೆಸರಾಗಿದ್ದು ಅನೇಕ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿದ್ದಾರೆ. ಅವರಿಗೆ ಸದಾ ಸಂತೋಷ, ಆರೋಗ್ಯ ಮತ್ತು ಯಶಸ್ಸು ದೊರೆಯಲಿ’ ಎಂದು ಟ್ವಿಟರ್ನಲ್ಲಿ ಹೇಳಿದ್ದಾರೆ.
Kerala Piravi day greetings to the people of Kerala. Kerala is widely admired for its picturesque surroundings and the industrious nature of its people. May the people of Kerala succeed in their various endeavours.
— Narendra Modi (@narendramodi) November 1, 2021
ಕೇರಳದಲ್ಲಿ ಈ ದಿನವನ್ನು ‘ಕೇರಳ ಪಿರವಿ ದಿನ’ ಎಂದು ಆಚರಿಸಲಾಗುತ್ತದೆ. ‘ಕೇರಳ ಜನರ ಎಲ್ಲಾ ಪ್ರಯತ್ನಗಳು ಯಶಸ್ವಿಯಾಗಲಿ’ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.
छत्तीसगढ़ के स्थापना दिवस पर राज्य के सभी लोगों को हार्दिक बधाई। मेरी कामना है कि लोकगीत, लोक-नृत्य और कला-संस्कृति के लिए विशिष्ट पहचान रखने वाला यह प्रदेश प्रगति के नए मानदंड स्थापित करे।
— Narendra Modi (@narendramodi) November 1, 2021
‘ಮಧ್ಯಪ್ರದೇಶ, ಛತ್ತೀಸ್ಗಡ ಮತ್ತು ಹರಿಯಾಣ ರಾಜ್ಯಗಳು ತಮ್ಮ ಯಶಸ್ಸಿನ ಪಥದಲ್ಲಿ ಮುಂದುವರೆಯಲಿ’ ಎಂದು ಪ್ರಧಾನಿ ಮೋದಿ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಭಾಷಾವಾರು ನೆಲೆಯಲ್ಲಿ 1956 ರಂದು ಆಂಧ್ರಪ್ರದೇಶ, ಮಧ್ಯಪ್ರದೇಶ, ಕರ್ನಾಟಕ ಮತ್ತು ಕೇರಳ ರಾಜ್ಯಗಳು ರಚನೆಯಾದವು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.