ಇಲ್ಲಿನ ಇಂದಿರಾಗಾಂಧಿ ಪ್ರತಿಷ್ಠಾನಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು, ಎಕ್ಸ್ಪೋದಲ್ಲಿದ್ದ ಮೂರು ಪ್ರದರ್ಶನಗಳನ್ನು ವೀಕ್ಷಿಸಿದರು. ನಂತರ ಪ್ರಧಾನಿಯವರು ಅಯೋಧ್ಯೆ ಅಭಿವೃದ್ಧಿಯ ಮಾಸ್ಟರ್ ಪ್ಲಾನ್ ಕುರಿತು ವಿಚಾರಿಸಿದರು.