<p><strong>ನವದೆಹಲಿ</strong>: ವಂಶ ಪಾರಂಪರ್ಯದ ಹೆಸರಿನಲ್ಲಿ ನಡೆಯುವ ರಾಜಕಾರಣ ಪ್ರಜಾಪ್ರಭುತ್ವದ ಶತ್ರು. ಇಂಥ ರಾಜಕಾರಣವನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.</p>.<p>ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ‘ತಮ್ಮ ವಂಶದ ಅಡ್ಡಹೆಸರಿನ ಆಧಾರದ ಮೇಲೆ ಚುನಾವಣೆಯಲ್ಲಿ ಗೆಲ್ಲುತ್ತಿದ್ದವರ ಸಂಖ್ಯೆ ಈಗ ಕ್ಷೀಣಿಸುತ್ತಿದೆ’ ಎಂದರು.</p>.<p>‘ಕುಟುಂಬವನ್ನು ರಕ್ಷಿಸುವ ಸಲುವಾಗಿಯೇ ಕೆಲವರು ರಾಜಕೀಯ ಕ್ಷೇತ್ರವನ್ನು ಪ್ರವೇಶಿಸುತ್ತಾರೆ. ರಾಜಕೀಯವನ್ನು ಕಾಯಿಲೆಯಿಂತೆ ಕಾಡುತ್ತಿರುವ ವಂಶಪಾರಂಪರ್ಯ ರಾಜಕಾರಣವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅಗತ್ಯ’ ಎಂದು ಹೇಳುವ ಮೂಲಕ ಅವರು ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ವಿರುದ್ಧ ಟೀಕಾಪ್ರಹಾರ ಮಾಡಿದರು.</p>.<p>‘ಯುವಜನತೆ ರಾಜಕೀಯ ಪ್ರವೇಶಿಸುವುದು ಅಗತ್ಯ. ಒಂದು ವೇಳೆ ಯುವಜನತೆ ರಾಜಕೀಯಕ್ಕೆ ಧುಮುಕದೇ ಇದ್ದಲ್ಲಿ ವಂಶಪಾರಂಪರ್ಯ ರಾಜಕಾರಣ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವುದನ್ನು ಮುಂದುವರಿಸುತ್ತದೆ’ ಎಂದು ಪ್ರತಿಪಾದಿಸಿದರು.</p>.<p>‘ಇತರ ಕ್ಷೇತ್ರಗಳಂತೆ, ರಾಜಕೀಯಕ್ಕೆ ಯುವಜನತೆ ಕಾಲಿಟ್ಟರೆ ಈ ಕ್ಷೇತ್ರಕ್ಕೂ ಹೊಸ ಯೋಚನೆ, ಶಕ್ತಿ ಹಾಗೂ ಉತ್ಸಾಹ ಬಂದಂತೆ ಆಗಲಿದೆ. ಈ ಹಿಂದೆ ಯುವ ಜನತೆ ರಾಜಕೀಯ ಪ್ರವೇಶಿಸಿದರೆ ಅವರು ದಾರಿತಪ್ಪುತ್ತಿದ್ದಾರೆ ಎಂದೇ ಅವರ ಕುಟುಂಬ ಭಾವಿಸುತ್ತಿತ್ತು. ಈಗ ಕಾಲ ಬದಲಾಗಿದ್ದು, ಪ್ರಾಮಾಣಿಕ ಜನರಿಗೆ ಅವಕಾಶ ನೀಡಬೇಕು ಎಂಬ ನಿಲುವು ಜನರದ್ದಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಂಶ ಪಾರಂಪರ್ಯದ ಹೆಸರಿನಲ್ಲಿ ನಡೆಯುವ ರಾಜಕಾರಣ ಪ್ರಜಾಪ್ರಭುತ್ವದ ಶತ್ರು. ಇಂಥ ರಾಜಕಾರಣವನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.</p>.<p>ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ‘ತಮ್ಮ ವಂಶದ ಅಡ್ಡಹೆಸರಿನ ಆಧಾರದ ಮೇಲೆ ಚುನಾವಣೆಯಲ್ಲಿ ಗೆಲ್ಲುತ್ತಿದ್ದವರ ಸಂಖ್ಯೆ ಈಗ ಕ್ಷೀಣಿಸುತ್ತಿದೆ’ ಎಂದರು.</p>.<p>‘ಕುಟುಂಬವನ್ನು ರಕ್ಷಿಸುವ ಸಲುವಾಗಿಯೇ ಕೆಲವರು ರಾಜಕೀಯ ಕ್ಷೇತ್ರವನ್ನು ಪ್ರವೇಶಿಸುತ್ತಾರೆ. ರಾಜಕೀಯವನ್ನು ಕಾಯಿಲೆಯಿಂತೆ ಕಾಡುತ್ತಿರುವ ವಂಶಪಾರಂಪರ್ಯ ರಾಜಕಾರಣವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅಗತ್ಯ’ ಎಂದು ಹೇಳುವ ಮೂಲಕ ಅವರು ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ವಿರುದ್ಧ ಟೀಕಾಪ್ರಹಾರ ಮಾಡಿದರು.</p>.<p>‘ಯುವಜನತೆ ರಾಜಕೀಯ ಪ್ರವೇಶಿಸುವುದು ಅಗತ್ಯ. ಒಂದು ವೇಳೆ ಯುವಜನತೆ ರಾಜಕೀಯಕ್ಕೆ ಧುಮುಕದೇ ಇದ್ದಲ್ಲಿ ವಂಶಪಾರಂಪರ್ಯ ರಾಜಕಾರಣ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವುದನ್ನು ಮುಂದುವರಿಸುತ್ತದೆ’ ಎಂದು ಪ್ರತಿಪಾದಿಸಿದರು.</p>.<p>‘ಇತರ ಕ್ಷೇತ್ರಗಳಂತೆ, ರಾಜಕೀಯಕ್ಕೆ ಯುವಜನತೆ ಕಾಲಿಟ್ಟರೆ ಈ ಕ್ಷೇತ್ರಕ್ಕೂ ಹೊಸ ಯೋಚನೆ, ಶಕ್ತಿ ಹಾಗೂ ಉತ್ಸಾಹ ಬಂದಂತೆ ಆಗಲಿದೆ. ಈ ಹಿಂದೆ ಯುವ ಜನತೆ ರಾಜಕೀಯ ಪ್ರವೇಶಿಸಿದರೆ ಅವರು ದಾರಿತಪ್ಪುತ್ತಿದ್ದಾರೆ ಎಂದೇ ಅವರ ಕುಟುಂಬ ಭಾವಿಸುತ್ತಿತ್ತು. ಈಗ ಕಾಲ ಬದಲಾಗಿದ್ದು, ಪ್ರಾಮಾಣಿಕ ಜನರಿಗೆ ಅವಕಾಶ ನೀಡಬೇಕು ಎಂಬ ನಿಲುವು ಜನರದ್ದಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>