<p><strong>ಸುಲ್ತಾನ್ಪುರ (ಉತ್ತರ ಪ್ರದೇಶ):</strong> ಇಲ್ಲಿನ ಕರ್ವಾಲ್ ಖೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪೂರ್ವಾಂಚಲ ಎಕ್ಸ್ಪ್ರೆಸ್ವೇ ಉದ್ಘಾಟಿಸಿದರು.</p>.<p>ಹೆದ್ದಾರಿಯಲ್ಲಿ ಸೇನಾ ಸರಕು ವಿಮಾನದಲ್ಲಿ ಬಂದಿಳಿದ ಮೋದಿ ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು.</p>.<p>ಎಕ್ಸ್ಪ್ರೆಸ್ವೇ ಉದ್ಘಾಟನೆ ಬಳಿಕ ವಾಯುಪಡೆಯು ವಿಶೇಷ ವೈಮಾನಿಕ ಹಾರಾಟ ಪ್ರದರ್ಶನ ನಡೆಸಿತು. ಇದನ್ನು ಪ್ರಧಾನಿ ವೀಕ್ಷಿಸಿದರು.</p>.<p>ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯು ಪಡೆಯ ಯುದ್ಧ ವಿಮಾನಗಳು ಹಾರಾಟ ಆರಂಭಿಸಲು ಮತ್ತು ಬಂದಿಳಿಯಲು ಸುಲ್ತಾನ್ಪುರ ಜಿಲ್ಲೆಯಲ್ಲಿ ನಿರ್ಮಿಸಿರುವ ಏರ್ಸ್ಟ್ರಿಪ್ ನೆರವಾಗಲಿದೆ. 3.2 ಕಿ.ಮೀ ಉದ್ದದ ವಿಮಾನ ಇಳಿಯುವ ದಾರಿಯನ್ನು ನಿರ್ಮಿಸಲಾಗಿದೆ.</p>.<p>340 ಕಿ.ಮೀ. ಉದ್ದದ ಪೂರ್ವಾಂಚಲ ಎಕ್ಸ್ಪ್ರೆಸ್ವೇ ಲಖನೌದ ಚಾಂದ್ಸರಾಯ್ ಗ್ರಾಮದಿಂದ ಶುರುವಾಗಿ ರಾಷ್ಟ್ರೀಯ ಹೆದ್ದಾರಿ 31ರ ಗಾಜಿಪುರದ ಹೈದರಿಯಾ ಗ್ರಾಮದಲ್ಲಿ (ಉತ್ತರ ಪ್ರದೇಶ–ಬಿಹಾರ ಗಡಿಯಿಂದ 18 ಕಿ.ಮೀ. ದೂರ) ಕೊನೆಯಾಗುತ್ತದೆ. ಈ ಎಕ್ಸ್ಪ್ರೆಸ್ವೇನಲ್ಲಿ ಪ್ರಸ್ತುತ ಆರು–ಪಥಗಳಿದ್ದು, ಮುಂದೆ ಎಂಟು ಪಥಗಳಿಗೆ ವಿಸ್ತರಿಸುವ ಅವಕಾಶವಿದೆ.</p>.<p>ಅಂದಾಜು ₹22,500 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪೂರ್ವಾಂಚಲ ಎಕ್ಸ್ಪ್ರೆಸ್ವೇ, ಉತ್ತರ ಪ್ರದೇಶದ ಪೂರ್ವ ಭಾಗದ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುವುದಾಗಿ ವಿಶ್ಲೇಷಿಸಲಾಗಿದೆ. 2018ರ ಜುಲೈನಲ್ಲಿ ಆಜಂಗಡದಲ್ಲಿ ಪ್ರಧಾನಿ ಮೋದಿ ಅವರು ಪೂರ್ವಾಂಚಲ ಎಕ್ಸ್ಪ್ರೆಸ್ವೇ ನಿರ್ಮಾಣ ಕಾರ್ಯಕ್ಕೆ ಅಡಿಗಲ್ಲು ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಲ್ತಾನ್ಪುರ (ಉತ್ತರ ಪ್ರದೇಶ):</strong> ಇಲ್ಲಿನ ಕರ್ವಾಲ್ ಖೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪೂರ್ವಾಂಚಲ ಎಕ್ಸ್ಪ್ರೆಸ್ವೇ ಉದ್ಘಾಟಿಸಿದರು.</p>.<p>ಹೆದ್ದಾರಿಯಲ್ಲಿ ಸೇನಾ ಸರಕು ವಿಮಾನದಲ್ಲಿ ಬಂದಿಳಿದ ಮೋದಿ ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು.</p>.<p>ಎಕ್ಸ್ಪ್ರೆಸ್ವೇ ಉದ್ಘಾಟನೆ ಬಳಿಕ ವಾಯುಪಡೆಯು ವಿಶೇಷ ವೈಮಾನಿಕ ಹಾರಾಟ ಪ್ರದರ್ಶನ ನಡೆಸಿತು. ಇದನ್ನು ಪ್ರಧಾನಿ ವೀಕ್ಷಿಸಿದರು.</p>.<p>ತುರ್ತು ಸಂದರ್ಭಗಳಲ್ಲಿ ಭಾರತೀಯ ವಾಯು ಪಡೆಯ ಯುದ್ಧ ವಿಮಾನಗಳು ಹಾರಾಟ ಆರಂಭಿಸಲು ಮತ್ತು ಬಂದಿಳಿಯಲು ಸುಲ್ತಾನ್ಪುರ ಜಿಲ್ಲೆಯಲ್ಲಿ ನಿರ್ಮಿಸಿರುವ ಏರ್ಸ್ಟ್ರಿಪ್ ನೆರವಾಗಲಿದೆ. 3.2 ಕಿ.ಮೀ ಉದ್ದದ ವಿಮಾನ ಇಳಿಯುವ ದಾರಿಯನ್ನು ನಿರ್ಮಿಸಲಾಗಿದೆ.</p>.<p>340 ಕಿ.ಮೀ. ಉದ್ದದ ಪೂರ್ವಾಂಚಲ ಎಕ್ಸ್ಪ್ರೆಸ್ವೇ ಲಖನೌದ ಚಾಂದ್ಸರಾಯ್ ಗ್ರಾಮದಿಂದ ಶುರುವಾಗಿ ರಾಷ್ಟ್ರೀಯ ಹೆದ್ದಾರಿ 31ರ ಗಾಜಿಪುರದ ಹೈದರಿಯಾ ಗ್ರಾಮದಲ್ಲಿ (ಉತ್ತರ ಪ್ರದೇಶ–ಬಿಹಾರ ಗಡಿಯಿಂದ 18 ಕಿ.ಮೀ. ದೂರ) ಕೊನೆಯಾಗುತ್ತದೆ. ಈ ಎಕ್ಸ್ಪ್ರೆಸ್ವೇನಲ್ಲಿ ಪ್ರಸ್ತುತ ಆರು–ಪಥಗಳಿದ್ದು, ಮುಂದೆ ಎಂಟು ಪಥಗಳಿಗೆ ವಿಸ್ತರಿಸುವ ಅವಕಾಶವಿದೆ.</p>.<p>ಅಂದಾಜು ₹22,500 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪೂರ್ವಾಂಚಲ ಎಕ್ಸ್ಪ್ರೆಸ್ವೇ, ಉತ್ತರ ಪ್ರದೇಶದ ಪೂರ್ವ ಭಾಗದ ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡುವುದಾಗಿ ವಿಶ್ಲೇಷಿಸಲಾಗಿದೆ. 2018ರ ಜುಲೈನಲ್ಲಿ ಆಜಂಗಡದಲ್ಲಿ ಪ್ರಧಾನಿ ಮೋದಿ ಅವರು ಪೂರ್ವಾಂಚಲ ಎಕ್ಸ್ಪ್ರೆಸ್ವೇ ನಿರ್ಮಾಣ ಕಾರ್ಯಕ್ಕೆ ಅಡಿಗಲ್ಲು ಹಾಕಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>