ರೈತರಿಗೆ ನೀರಾವರಿಗಾಗಿ ಹಗಲುಹೊತ್ತಿನಲ್ಲಿ ವಿದ್ಯುತ್ ಪೂರೈಕೆ ಮಾಡುವುದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಇತ್ತೀಚೆಗೆ ಕಿಸಾನ್ ಸೂರ್ಯೋದಯ ಯೋಜನೆ’ ಘೋಷಿಸಿದ್ದರು. ಈ ಯೋಜನೆಯಡಿ ಬೆಳಿಗ್ಗೆ 5ರಿಂದ ರಾತ್ರಿ 9ರ ವರೆಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಇದಕ್ಕಾಗಿ ಬಜೆಟ್ನಲ್ಲಿ ₹3,500 ಕೋಟಿ ಘೋಷಿಸಲಾಗಿತ್ತು. 2023ರ ಒಳಗೆ ಟ್ರಾನ್ಸ್ಮಿಷನ್ ಮೂಲಸೌಕರ್ಯ ಒದಗಿಸುವ ಗುರಿ ಹೊಂದಲಾಗಿದೆ.