ಬಿಹಾರದ ನವಾಡಾ ಜಿಲ್ಲೆಯ ಹಿಸುವಾದಲ್ಲಿ ಚುನಾವಣಾರ್ಯಾಲಿಯನ್ನುದ್ದೇಶಿ ಮಾತನಾಡಿದ ರಾಹುಲ್ ಗಾಂಧಿ,‘ ಚೀನಾದ ಸೈನ್ಯವು ಭಾರತದ ಭೂಪ್ರದೇಶಕ್ಕೆ ನುಸುಳಿದೆ. ಭಾರತದ 1,200 ಕಿ.ಮೀ ಭೂ ಪ್ರದೇಶವನ್ನು ಅವರು ಅತಿಕ್ರಮಿಸಿದ್ದಾರೆ. ಚೀನಾದ ಸೈನಿಕರು ಭಾರತದೊಳಗೆ ನುಸುಳಿದ್ದರೂ, ಪ್ರಧಾನಿ ಏಕೆ ಸುಳ್ಳು ಹೇಳಿ ನಮ್ಮ ಸೈನಿಕರನ್ನು ಅವಮಾನಿಸುತ್ತಿದ್ದಾರೆ. ಚೀನಾದ ಸೈನಿಕರನ್ನು ಯಾವಾಗ ಭಾರತದಿಂದ ಹೊರ ಹಾಕುತ್ತೀರಿ’ ಎಂದು ಅವರು ಪ್ರಶ್ನಿಸಿದ್ದಾರೆ.