ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಾಲ ಪುರಸ್ಕಾರ್‘ ಮಕ್ಕಳೊಂದಿಗೆ ಪ್ರಧಾನಿ ಸಂವಾದ

Last Updated 25 ಜನವರಿ 2021, 11:13 IST
ಅಕ್ಷರ ಗಾತ್ರ

ನವದೆಹಲಿ: ‘ಕೋವಿಡ್‌ 19’ಸಾಂಕ್ರಾಮಿಕದ ಅವಧಿಯಲ್ಲಿ ಕೈತೊಳೆಯುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿಮೂಡಿಸಿದ ಮಕ್ಕಳ ಕಾಳಜಿಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು.

ವಿಡಿಯೊ ಕಾನ್ಫರೆನ್ಸ್‌ ಮೂಲಕ 'ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ‘ ಪ್ರಶಸ್ತಿ ಪುರಸ್ಕೃತ 32 ಮಕ್ಕಳೊಂದಿಗೆ ನಡೆಸಿದ ಸಂವಾದದಲ್ಲಿ ಪ್ರಧಾನಿಯವರು ಪ್ರಶಸ್ತಿ ಪುರಸ್ಕೃತರನ್ನು ಶ್ಲಾಘಿಸಿದರು. ‘ಪ್ರಶಸ್ತಿ ಪಡೆದಿರುವ ಮಕ್ಕಳು ಎಂದಿಗೂ ತಾವು ಮಾಡುತ್ತಿರುವ ಇಂಥ ಕಾರ್ಯಗಳನ್ನು ನಿಲ್ಲಿಸಬಾರದು‘ ಎಂದು ಕಿವಿ ಮಾತು ಹೇಳಿದರು.

ದೇಶಕ್ಕಾಗಿ ಕೆಲಸ ಮಾಡುವಂತೆ ಮಕ್ಕಳಿಗೆ ತಿಳಿಸಿದ ಪ್ರಧಾನಿಯವರು, 75 ನೇ ಸ್ವಾತಂತ್ರ್ಯೋತ್ಸವ ಸಮೀಪಿಸು ತ್ತಿದ್ದು, ಈ ಸಂದರ್ಭದಲ್ಲಿ ನೀವೆಲ್ಲ ಯಾವ ರೀತಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬಹುದು ಎಂಬುದರ ಬಗ್ಗೆ ಯೋಚಿಸುವಂತೆ ಪ್ರಧಾನಿ ಮಕ್ಕಳಿಗೆ ತಿಳಿಸಿದರು.

ಮಹಾನ್ ನಾಯಕರ ಜೀವನ ಚರಿತ್ರೆಗಳನ್ನು ಓದಲು ಹೇಳಿದ ಪ್ರಧಾನಿಯವರು, ಆ ಚರಿತ್ರೆಗಳು ಜೀವನಕ್ಕೆ ಸ್ಪೂರ್ತಿ ನೀಡುತ್ತವೆ ಎಂದರು.

ಇದೇ ವೇಳೆ ಕೃಷಿ ಉಪಕರಣಗಳನ್ನು ತಯಾರಿಸಿ, ಬಾಲಪುರಸ್ಕಾರಕ್ಕೆ ಆಯ್ಕೆಯಾದ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಾಲಕ ಕೆ.ರಾಕೇಶ್ ಕೃಷ್ಣ ಪ್ರಧಾನಿ ಮಾತನಾಡಿದರು. ‘ಆಧುನಿಕ ಕೃಷಿಯು ದೇಶಕ್ಕೆ ಅವಶ್ಯಕತೆಯಾಗಿದೆ‘ ಎಂದರು.

'ಸ್ವಚ್ ಭಾರತ್' ಕಾರ್ಯಕ್ರಮದ ಅಂಗವಾಗಿ ಮಕ್ಕಳು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT