ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿ ಮಾತನಾಡಿದ್ದ ಮುರ್ಮು ಅವರು, ರಾಷ್ಟ್ರಪತಿ ಹುದ್ದೆಗೆ ಏರಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ. ಭಾರತದ ಎಲ್ಲ ಬಡವರ ಸಾಧನೆಯಾಗಿದೆ. ಈ ಹುದ್ದೆಗೆ ನನ್ನ ಹೆಸರನ್ನು ಘೋಷಿಸಿದ್ದು, ದೇಶದಲ್ಲಿ ಬಡವರು ಕನಸನ್ನು ಕಾಣುವುದಷ್ಟೇ ಅಲ್ಲ. ಅದನ್ನು ಸಾಕಾರಗೊಳಿಸಿಕೊಳ್ಳಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು.