<p><strong>ನವದೆಹಲಿ:</strong> ಪೆಗಾಸಸ್ ಕುತಂತ್ರಾಂಶ ವಿಚಾರಕ್ಕೆ ಸಂಬಂಧಿಸಿ ಚರ್ಚೆಗೆ ಸರ್ಕಾರ ಅವಕಾಶ ನೀಡದಿರುವುದು ಸಂಸತ್ ಕಲಾಪಕ್ಕೆ ಅಡ್ಡಿಯುಂಟಾಗಲು ಕಾರಣವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ಸುಗಮ ಕಲಾಪ ನಡೆಯುವಂತೆ ಮಾಡಬೇಕು ಎಂದು ಆರ್ಜೆಡಿ ಸಂಸದ ಮನೋಜ್ ಕುಮಾರ್ ಝಾ ಆಗ್ರಹಿಸಿದ್ದಾರೆ.</p>.<p>ಗದ್ದಲದಿಂದಾಗಿ ಕಲಾಪದ ಸಮಯ ವ್ಯರ್ಥವಾಗಿರುವ ಕಾರಣ ಮುಂಗಾರು ಅಧಿವೇಶನ ಅವಧಿಯನ್ನು ವಿಸ್ತರಿಸುವಂತೆಯೂ ಅವರು ಒತ್ತಾಯಿಸಿದ್ದಾರೆ.</p>.<p>ಪ್ರತಿಪಕ್ಷಗಳ ಜತೆ ಮಾತುಕತೆಗೆ ಸಿದ್ಧ ಎಂದು ಸರ್ಕಾರ ಹೇಳುತ್ತದೆ. ಆದರೆ, ಮಾತುಕತೆಯ ಬಾಗಿಲನ್ನು ಮುಚ್ಚುತ್ತಿದೆ ಎಂದು ಝಾ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/parliament-functioned-for-less-than-17-pc-of-total-time-rs-133-crore-of-taxpayers-money-lost-govt-853655.html" target="_blank">ನಿಗದಿತ ಅವಧಿಗೆ ನಡೆಯದ ಸಂಸತ್ ಕಲಾಪ: ₹133 ಕೋಟಿ ಸಾರ್ವಜನಿಕ ತೆರಿಗೆ ಹಣ ವ್ಯರ್ಥ</a></p>.<p>ಜುಲೈ 19ರಂದು ಮುಂಗಾರು ಅಧಿವೇಶನ ಆರಂಭವಾದ ಬಳಿಕ ನಿರಂತರವಾಗಿ ಪ್ರತಿಪಕ್ಷಗಳ ಗದ್ದಲದಿಂದಾಗಿ ಸುಗಮ ಕಲಾಪ ನಡೆದಿಲ್ಲ. ಪೆಗಾಸಸ್ ಕುತಂತ್ರಾಂಶ ಕುರಿತ ಚರ್ಚೆಗೆ ಅವಕಾಶ ನೀಡಬೇಕೆಂದು ಪಟ್ಟುಹಿಡಿದಿರುವ ಪ್ರತಿಪಕ್ಷಗಳು ಕಲಾಪಕ್ಕೆ ಅಡ್ಡಿಯುಂಟುಮಾಡುತ್ತಿವೆ.</p>.<p>ನಿಗದಿತ ಅವಧಿಗೆ ಸಂಸತ್ ಕಲಾಪ ನಡೆಯದೇ ಇರುವುದರಿಂದ ₹133 ಕೋಟಿ ಸಾರ್ವಜನಿಕ ತೆರಿಗೆ ಹಣ ವ್ಯರ್ಥವಾಗಿದೆ ಎಂದು ಇತ್ತಿಚೆಗೆ ವರದಿಯೊಂದರಿಂದ ತಿಳಿದುಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೆಗಾಸಸ್ ಕುತಂತ್ರಾಂಶ ವಿಚಾರಕ್ಕೆ ಸಂಬಂಧಿಸಿ ಚರ್ಚೆಗೆ ಸರ್ಕಾರ ಅವಕಾಶ ನೀಡದಿರುವುದು ಸಂಸತ್ ಕಲಾಪಕ್ಕೆ ಅಡ್ಡಿಯುಂಟಾಗಲು ಕಾರಣವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಿ ಸುಗಮ ಕಲಾಪ ನಡೆಯುವಂತೆ ಮಾಡಬೇಕು ಎಂದು ಆರ್ಜೆಡಿ ಸಂಸದ ಮನೋಜ್ ಕುಮಾರ್ ಝಾ ಆಗ್ರಹಿಸಿದ್ದಾರೆ.</p>.<p>ಗದ್ದಲದಿಂದಾಗಿ ಕಲಾಪದ ಸಮಯ ವ್ಯರ್ಥವಾಗಿರುವ ಕಾರಣ ಮುಂಗಾರು ಅಧಿವೇಶನ ಅವಧಿಯನ್ನು ವಿಸ್ತರಿಸುವಂತೆಯೂ ಅವರು ಒತ್ತಾಯಿಸಿದ್ದಾರೆ.</p>.<p>ಪ್ರತಿಪಕ್ಷಗಳ ಜತೆ ಮಾತುಕತೆಗೆ ಸಿದ್ಧ ಎಂದು ಸರ್ಕಾರ ಹೇಳುತ್ತದೆ. ಆದರೆ, ಮಾತುಕತೆಯ ಬಾಗಿಲನ್ನು ಮುಚ್ಚುತ್ತಿದೆ ಎಂದು ಝಾ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/parliament-functioned-for-less-than-17-pc-of-total-time-rs-133-crore-of-taxpayers-money-lost-govt-853655.html" target="_blank">ನಿಗದಿತ ಅವಧಿಗೆ ನಡೆಯದ ಸಂಸತ್ ಕಲಾಪ: ₹133 ಕೋಟಿ ಸಾರ್ವಜನಿಕ ತೆರಿಗೆ ಹಣ ವ್ಯರ್ಥ</a></p>.<p>ಜುಲೈ 19ರಂದು ಮುಂಗಾರು ಅಧಿವೇಶನ ಆರಂಭವಾದ ಬಳಿಕ ನಿರಂತರವಾಗಿ ಪ್ರತಿಪಕ್ಷಗಳ ಗದ್ದಲದಿಂದಾಗಿ ಸುಗಮ ಕಲಾಪ ನಡೆದಿಲ್ಲ. ಪೆಗಾಸಸ್ ಕುತಂತ್ರಾಂಶ ಕುರಿತ ಚರ್ಚೆಗೆ ಅವಕಾಶ ನೀಡಬೇಕೆಂದು ಪಟ್ಟುಹಿಡಿದಿರುವ ಪ್ರತಿಪಕ್ಷಗಳು ಕಲಾಪಕ್ಕೆ ಅಡ್ಡಿಯುಂಟುಮಾಡುತ್ತಿವೆ.</p>.<p>ನಿಗದಿತ ಅವಧಿಗೆ ಸಂಸತ್ ಕಲಾಪ ನಡೆಯದೇ ಇರುವುದರಿಂದ ₹133 ಕೋಟಿ ಸಾರ್ವಜನಿಕ ತೆರಿಗೆ ಹಣ ವ್ಯರ್ಥವಾಗಿದೆ ಎಂದು ಇತ್ತಿಚೆಗೆ ವರದಿಯೊಂದರಿಂದ ತಿಳಿದುಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>