<p><strong>ನವದೆಹಲಿ:</strong> ಕೋವಿಡ್–19 ಸಾಂಕ್ರಾಮಿಕವು ಶತಮಾನದಲ್ಲಿ ಒಮ್ಮೆ ಬರುವ ಬಿಕ್ಕಟ್ಟಾಗಿದ್ದು, ಪಿಡುಗಿನ ವಿರುದ್ಧದ ಹೋರಾಟದಲ್ಲಿ ಸಮಾಜದ ಪಾಲ್ಗೊಳ್ಳುವಿಕೆಯೂ ಬಹುಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಕೇಂದ್ರ ಮಂತ್ರಿ ಮಂಡಲದ ಜತೆ ಸಭೆ ನಡೆಸಿದ ಅವರು, ದೇಶವು ಕೋವಿಡ್ ವಿರುದ್ಧ ಜಯ ಗಳಿಸಿ ಮತ್ತೆ ಮೇಲೆದ್ದು ನಿಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/states-run-out-of-covid-19-vaccines-nation-wide-inoculation-drive-delayed-826857.html" itemprop="url">ಕೋವಿಡ್ ಲಸಿಕೆ ಕೊರತೆ: ಹಲವು ರಾಜ್ಯಗಳಲ್ಲಿ ಅಭಿಯಾನ ವಿಳಂಬ</a></p>.<p>ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸಭೆ ನಡೆಸಿದ ಪ್ರಧಾನಿ, ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರಗಳ ಜನರ ಜತೆ ಸಂಪರ್ಕದಲ್ಲಿರುವಂತೆ ಸಚಿವರಿಗೆ ಸೂಚಿಸಿದ್ದಾರೆ. ಜನರಿಗೆ ಸಹಾಯ ಮಾಡುವುದರ ಜತೆ ಅವರ ಅಭಿಪ್ರಾಯ ಸಂಗ್ರಹಿಸುವಂತೆ ನಿರ್ದೇಶಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಸಮಸ್ಯೆಗಳನ್ನು ತ್ವರಿತವಾಗಿ ಗುರುತಿಸಿ ಅವುಗಳನ್ನು ಪರಿಹರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.</p>.<p>ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರದ ಎಲ್ಲಾ ಸಂಸ್ಥೆಗಳು ಒಗ್ಗಟ್ಟಿನಿಂದ ಮತ್ತು ತ್ವರಿತವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಸಭೆಯಲ್ಲಿ ಮೋದಿ ಹೇಳಿದ್ದಾರೆ. ಕಳೆದ 14 ತಿಂಗಳುಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಪರಾಮರ್ಶೆ ನಡೆಸಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/bihar-govt-chief-secretary-arun-singh-dies-of-covid-19-826862.html" itemprop="url">ಕೋವಿಡ್: ಬಿಹಾರ ಮುಖ್ಯ ಕಾರ್ಯದರ್ಶಿ ಸಾವು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್–19 ಸಾಂಕ್ರಾಮಿಕವು ಶತಮಾನದಲ್ಲಿ ಒಮ್ಮೆ ಬರುವ ಬಿಕ್ಕಟ್ಟಾಗಿದ್ದು, ಪಿಡುಗಿನ ವಿರುದ್ಧದ ಹೋರಾಟದಲ್ಲಿ ಸಮಾಜದ ಪಾಲ್ಗೊಳ್ಳುವಿಕೆಯೂ ಬಹುಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಕೇಂದ್ರ ಮಂತ್ರಿ ಮಂಡಲದ ಜತೆ ಸಭೆ ನಡೆಸಿದ ಅವರು, ದೇಶವು ಕೋವಿಡ್ ವಿರುದ್ಧ ಜಯ ಗಳಿಸಿ ಮತ್ತೆ ಮೇಲೆದ್ದು ನಿಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/states-run-out-of-covid-19-vaccines-nation-wide-inoculation-drive-delayed-826857.html" itemprop="url">ಕೋವಿಡ್ ಲಸಿಕೆ ಕೊರತೆ: ಹಲವು ರಾಜ್ಯಗಳಲ್ಲಿ ಅಭಿಯಾನ ವಿಳಂಬ</a></p>.<p>ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸಭೆ ನಡೆಸಿದ ಪ್ರಧಾನಿ, ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರಗಳ ಜನರ ಜತೆ ಸಂಪರ್ಕದಲ್ಲಿರುವಂತೆ ಸಚಿವರಿಗೆ ಸೂಚಿಸಿದ್ದಾರೆ. ಜನರಿಗೆ ಸಹಾಯ ಮಾಡುವುದರ ಜತೆ ಅವರ ಅಭಿಪ್ರಾಯ ಸಂಗ್ರಹಿಸುವಂತೆ ನಿರ್ದೇಶಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಸಮಸ್ಯೆಗಳನ್ನು ತ್ವರಿತವಾಗಿ ಗುರುತಿಸಿ ಅವುಗಳನ್ನು ಪರಿಹರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.</p>.<p>ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರದ ಎಲ್ಲಾ ಸಂಸ್ಥೆಗಳು ಒಗ್ಗಟ್ಟಿನಿಂದ ಮತ್ತು ತ್ವರಿತವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಸಭೆಯಲ್ಲಿ ಮೋದಿ ಹೇಳಿದ್ದಾರೆ. ಕಳೆದ 14 ತಿಂಗಳುಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಪರಾಮರ್ಶೆ ನಡೆಸಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/bihar-govt-chief-secretary-arun-singh-dies-of-covid-19-826862.html" itemprop="url">ಕೋವಿಡ್: ಬಿಹಾರ ಮುಖ್ಯ ಕಾರ್ಯದರ್ಶಿ ಸಾವು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>