ನವದೆಹಲಿ: ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ 91ನೇ ಜನ್ಮ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶನಿವಾರ ಗೌರವ ನಮನ ಸಲ್ಲಿಸಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು ಎಂದು ರಾಷ್ಟ್ರಪತಿ ಭವನ ಟ್ವೀಟ್ ಮಾಡಿದೆ.
President Droupadi Murmu paid floral tributes to Dr APJ Abdul Kalam, former President of India, on his birth anniversary at Rashtrapati Bhavan. pic.twitter.com/yQhLmUGU1Y
— President of India (@rashtrapatibhvn) October 15, 2022
‘ಕಲಾಂ ಅವರು ರಾಷ್ಟ್ರಪತಿಯಾಗಿ, ವಿಜ್ಞಾನಿಯಾಗಿ ದೇಶಕ್ಕೆ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ. ಅವರ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರ ಜೀವನ ಪಯಣ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Tributes to our former President Dr. APJ Abdul Kalam. He is greatly admired for his contribution to our nation as a scientist and as a President who struck a chord with every section of society. pic.twitter.com/vPwICWxA3u
— Narendra Modi (@narendramodi) October 15, 2022
ಭಾರತದ ಮಾಜಿ ರಾಷ್ಟ್ರಪತಿಗಳು ಹಾಗೂ ಭಾರತದ ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಅವರ ವ್ಯಕ್ತಿತ್ವ, ಸಾಧನೆ ಮತ್ತು ಅವರು ಈ ದೇಶಕ್ಕೆ ನೀಡಿದ ಕೊಡುಗೆಗಳು ನಮ್ಮೆಲ್ಲರಿಗೂ ಪ್ರೇರಣೆಯಾಗಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಭಾರತದ ಮಾಜಿ ರಾಷ್ಟ್ರಪತಿಗಳು ಹಾಗೂ ಭಾರತದ ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಶ್ರೀ ಎ.ಪಿ.ಜೆ ಅಬ್ದುಲ್ ಕಲಾಂ ರವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ಅವರ ವ್ಯಕ್ತಿತ್ವ, ಸಾಧನೆ ಮತ್ತು ಅವರು ಈ ದೇಶಕ್ಕೆ ನೀಡಿದ ಕೊಡುಗೆಗಳು ನಮ್ಮೆಲ್ಲರಿಗೂ ಪ್ರೇರಣೆಯಾಗಿವೆ. pic.twitter.com/1rMsSYxKAE
— Basavaraj S Bommai (@BSBommai) October 15, 2022
ಮಾಜಿ ರಾಷ್ಟ್ರಪತಿಗಳು, ನಮ್ಮ ದೇಶದ ಕ್ಷಿಪಣಿ ಪಿತಾಮಹರು ಹಾಗೂ ಜಗತ್ತು ಕಂಡ ಸರ್ವಶ್ರೇಷ್ಠ ಕ್ಷಿಪಣಿ ವಿಜ್ಞಾನಿಗಳೂ ಆಗಿದ್ದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. ‘ಜನರ ರಾಷ್ಟ್ರಪತಿ’ಗಳಾಗಿದ್ದ ಕಲಾಂ ಅವರು ಸದಾ ಸ್ಮರಣೀಯರು’ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮಾಜಿ ರಾಷ್ಟ್ರಪತಿಗಳು, ನಮ್ಮ ದೇಶದ ಕ್ಷಿಪಣಿ ಪಿತಾಮಹರು ಹಾಗೂ ಜಗತ್ತು ಕಂಡ ಸರ್ವಶ್ರೇಷ್ಠ ಕ್ಷಿಪಣಿ ವಿಜ್ಞಾನಿಗಳೂ ಆಗಿದ್ದ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 15, 2022
'ಜನರ ರಾಷ್ಟ್ರಪತಿ'ಗಳಾಗಿದ್ದ ಶ್ರೀ ಕಲಾಂ ಅವರು ಸದಾ ಸ್ಮರಣೀಯರು. pic.twitter.com/0ro2jLIn6s
ಅಬ್ದುಲ್ ಕಲಾಂ ಅವರು 1931 ರಲ್ಲಿ ತಮಿಳುನಾಡಿನ ರಾಮೇಶ್ವರಂನಲ್ಲಿ ಜನಿಸಿದರು. ರಾಷ್ಟ್ರಪತಿ ಭವನದ ಬಾಗಿಲನ್ನು ಜನಸಾಮಾನ್ಯರಿಗೆ ತೆರೆಯುವ ಮೂಲಕ ‘ಜನರ ರಾಷ್ಟ್ರಪತಿ’ ಎನಿಸಿಕೊಂಡರು. ಕ್ಷಿಪಣಿ ಅಭಿವೃದ್ದಿಯಲ್ಲಿ ಅವರ ಕೊಡುಗೆಗಾಗಿ ಅವರನ್ನು ‘ಭಾರತದ ಕ್ಷಿಪಣಿ ಪಿತಾಮಹ’ ಎಂದು ಕರೆಯಲಾಗುತ್ತದೆ. ಕಲಾಂ ಅವರು 2015ರಲ್ಲಿ ನಿಧನರಾದರು.
ಇವನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.