<p><strong>ನವದೆಹಲಿ</strong>: ಕಾರ್ಗಿಲ್ ಯುದ್ಧದಲ್ಲಿ ವಿಜಯ ಸಾಧಿಸಿದ 22ನೇ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ಹುತಾತ್ಮ ಯೋಧರಿಗೆ ದೇಶದಾದ್ಯಂತ ಗೌರವ ಸಲ್ಲಿಸಲಾಯಿತು.</p>.<p>ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯರು, ರಾಜಕೀಯ ಮುಖಂಡರು, ನಾಗರಿಕರು ಹುತಾತ್ಮ ಯೋಧರನ್ನು ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಉತ್ತರ ಕಾಶ್ಮೀರದ ಬಾರಾಮುಲ್ಲಾ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗೌರವ ಸಲ್ಲಿಸಿದರು.</p>.<p>ಹವಾಮಾನ ವೈಪರೀತ್ಯದಿಂದಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲಡಾಖ್ನಲ್ಲಿನ ದ್ರಾಸ್ ಭೇಟಿಯನ್ನು ರದ್ದುಪಡಿಸಿದರು. ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರಪತಿ ಅವರು ದ್ರಾಸ್ಗೆ ಭೇಟಿ ನೀಡಲು ಉದ್ದೇಶಿಸಿದ್ದರು.</p>.<p>ಹುತಾತ್ಮ ಯೋಧರನ್ನು ಸ್ಮರಿಸಿ ಟ್ವೀಟ್ ಮಾಡಿರುವ ಪ್ರಧಾನಿ ಅವರು, ‘ಹುತಾತ್ಮರಾಗಿರುವ ಯೋಧರು ನಮಗೆ ಪ್ರೇರಣೆಯಾಗಿದ್ದಾರೆ. ಯೋಧರ ತ್ಯಾಗ ಮತ್ತು ಶೌರ್ಯವನ್ನು ದೇಶವು ಸ್ಮರಿಸುತ್ತದೆ’ ಎಂದು ಹೇಳಿದ್ದಾರೆ.</p>.<p>‘ಸಮರ್ಪಣಾ ಭಾವದಿಂದ ಮತ್ತು ಪರಾಕ್ರಮದಿಂದ ನಮ್ಮ ದೇಶವನ್ನು ರಕ್ಷಿಸುವ ಸಂದರ್ಭದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>‘ನಮ್ಮ ತ್ರಿವರ್ಣ ಧ್ವಜದ ಗೌರವ ಮತ್ತು ಘನತೆಯನ್ನು ಎತ್ತಿ ಹಿಡಿಯಲು ತಮ್ಮ ಬದುಕನ್ನೇ ತ್ಯಾಗ ಮಾಡಿದ ಪ್ರತಿಯೊಬ್ಬ ಯೋಧರಿಗೆ ಹೃದಯಪೂರ್ವಕ ಶ್ರದ್ಧಾಂಜಲಿ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>‘ದೇಶದ ಭದ್ರತೆಗಾಗಿ ಯೋಧರ ಮತ್ತು ಅವರ ಕುಟುಂಬದ ತ್ಯಾಗವನ್ನು ನಾವು ಸದಾ ಸ್ಮರಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>1999ರಲ್ಲಿ ಪಾಕಿಸ್ತಾನದ ಸೇನೆ ಆಕ್ರಮಿಸಿಕೊಂಡಿದ್ದ ಕಾರ್ಗಿಲ್ನ ಪ್ರದೇಶಗಳನ್ನು ಭಾರತೀಯ ಯೋಧರು ಮರಳಿ ವಶಕ್ಕೆ ಪಡೆದಿದ್ದರು. ಈ ಕಾರ್ಯಾಚರಣೆಗೆ ‘ಆಪರೇಷನ್ ವಿಜಯ್’ ಎಂದು ಹೆಸರಿಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾರ್ಗಿಲ್ ಯುದ್ಧದಲ್ಲಿ ವಿಜಯ ಸಾಧಿಸಿದ 22ನೇ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ಹುತಾತ್ಮ ಯೋಧರಿಗೆ ದೇಶದಾದ್ಯಂತ ಗೌರವ ಸಲ್ಲಿಸಲಾಯಿತು.</p>.<p>ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯರು, ರಾಜಕೀಯ ಮುಖಂಡರು, ನಾಗರಿಕರು ಹುತಾತ್ಮ ಯೋಧರನ್ನು ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದರು.</p>.<p>ಉತ್ತರ ಕಾಶ್ಮೀರದ ಬಾರಾಮುಲ್ಲಾ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗೌರವ ಸಲ್ಲಿಸಿದರು.</p>.<p>ಹವಾಮಾನ ವೈಪರೀತ್ಯದಿಂದಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲಡಾಖ್ನಲ್ಲಿನ ದ್ರಾಸ್ ಭೇಟಿಯನ್ನು ರದ್ದುಪಡಿಸಿದರು. ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಷ್ಟ್ರಪತಿ ಅವರು ದ್ರಾಸ್ಗೆ ಭೇಟಿ ನೀಡಲು ಉದ್ದೇಶಿಸಿದ್ದರು.</p>.<p>ಹುತಾತ್ಮ ಯೋಧರನ್ನು ಸ್ಮರಿಸಿ ಟ್ವೀಟ್ ಮಾಡಿರುವ ಪ್ರಧಾನಿ ಅವರು, ‘ಹುತಾತ್ಮರಾಗಿರುವ ಯೋಧರು ನಮಗೆ ಪ್ರೇರಣೆಯಾಗಿದ್ದಾರೆ. ಯೋಧರ ತ್ಯಾಗ ಮತ್ತು ಶೌರ್ಯವನ್ನು ದೇಶವು ಸ್ಮರಿಸುತ್ತದೆ’ ಎಂದು ಹೇಳಿದ್ದಾರೆ.</p>.<p>‘ಸಮರ್ಪಣಾ ಭಾವದಿಂದ ಮತ್ತು ಪರಾಕ್ರಮದಿಂದ ನಮ್ಮ ದೇಶವನ್ನು ರಕ್ಷಿಸುವ ಸಂದರ್ಭದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>‘ನಮ್ಮ ತ್ರಿವರ್ಣ ಧ್ವಜದ ಗೌರವ ಮತ್ತು ಘನತೆಯನ್ನು ಎತ್ತಿ ಹಿಡಿಯಲು ತಮ್ಮ ಬದುಕನ್ನೇ ತ್ಯಾಗ ಮಾಡಿದ ಪ್ರತಿಯೊಬ್ಬ ಯೋಧರಿಗೆ ಹೃದಯಪೂರ್ವಕ ಶ್ರದ್ಧಾಂಜಲಿ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>‘ದೇಶದ ಭದ್ರತೆಗಾಗಿ ಯೋಧರ ಮತ್ತು ಅವರ ಕುಟುಂಬದ ತ್ಯಾಗವನ್ನು ನಾವು ಸದಾ ಸ್ಮರಿಸುತ್ತೇವೆ’ ಎಂದು ಹೇಳಿದ್ದಾರೆ.</p>.<p>1999ರಲ್ಲಿ ಪಾಕಿಸ್ತಾನದ ಸೇನೆ ಆಕ್ರಮಿಸಿಕೊಂಡಿದ್ದ ಕಾರ್ಗಿಲ್ನ ಪ್ರದೇಶಗಳನ್ನು ಭಾರತೀಯ ಯೋಧರು ಮರಳಿ ವಶಕ್ಕೆ ಪಡೆದಿದ್ದರು. ಈ ಕಾರ್ಯಾಚರಣೆಗೆ ‘ಆಪರೇಷನ್ ವಿಜಯ್’ ಎಂದು ಹೆಸರಿಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>