ನವದೆಹಲಿ: ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ (ಪಿಎಂ–ಕಿಸಾನ್) ಯೋಜನೆಯಡಿ 8ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದ್ದಾರೆ.
ಸುಮಾರು ₹20 ಸಾವಿರ ಕೋಟಿ ಮೊತ್ತ ಬಿಡುಗಡೆ ಮಾಡಲಾಗಿದ್ದು, 9.5 ಕೋಟಿಗೂ ಹೆಚ್ಚುರೈತರಿಗೆ ಇದರ ಪ್ರಯೋಜನ ದೊರೆಯಲಿದೆ.
ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಹ ವಿಡಿಯೊ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿ, ಪಶ್ಚಿಮ ಬಂಗಾಳವೂ ಯೋಜನೆಯಲ್ಲಿ ಸೇರಿಕೊಂಡಿದೆ. ಬಂಗಾಳದ 7 ಲಕ್ಷಕ್ಕೂ ಹೆಚ್ಚು ರೈತರಿಗೆ ಯೋಜನೆಯ ಪ್ರಯೋಜನ ದೊರೆಯುತ್ತಿದೆ ಎಂದು ಹೇಳಿದ್ದಾರೆ.