ಸಹಾನುಭೂತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ರಾಮ ಮನೋಹರ್ ಲೋಹಿಯಾ ಅವರು ಹೇಳುತ್ತಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದವರು (ಸಮಾಜವಾದಿ ಪಕ್ಷವನ್ನು ಉದ್ದೇಶಿಸಿ) ಬಡವರ ನೋವಿನ ಬಗ್ಗೆ ಗಮನವನ್ನೇ ಹರಿಸಿಲ್ಲ. ಹಿಂದಿನ ಸರ್ಕಾರಗಳು ಭ್ರಷ್ಟಾಚಾರ ಮತ್ತು ಅಪರಾಧ ಕೃತ್ಯಗಳ ಜತೆಗೆ ನಂಟು ಹೊಂದಿದ್ದವು ಎಂದು ಮೋದಿ ಆರೋಪಿಸಿದ್ದಾರೆ.