<p><strong>ಕುಶೀನಗರ:</strong> ‘ಸಮಾಜವಾದಿ ಪಕ್ಷವು ರಾಮ ಮನೋಹರ್ ಲೋಹಿಯಾ ಅವರ ಸಿದ್ಧಾಂತದಿಂದ ಬದಲಾಗಿದೆ. ಆ ಪಕ್ಷದ ನಾಯಕರು ಈಗ ‘ಪರಿವಾರವಾದ’ವನ್ನು (ವಂಶ ರಾಜಕಾರಣ) ಉತ್ತೇಜಿಸುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.</p>.<p>ಉತ್ತರ ಪ್ರದೇಶದ ಕುಶೀನಗರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/pm-narendra-modi-to-cvc-cbi-says-ensure-no-safe-havens-anywhere-for-those-who-betray-india-877002.html" itemprop="url">ದೇಶ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಬಿಐ, ಸಿವಿಸಿಗೆ ಪ್ರಧಾನಿ ಮೋದಿ</a></p>.<p>ಸಹಾನುಭೂತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ರಾಮ ಮನೋಹರ್ ಲೋಹಿಯಾ ಅವರು ಹೇಳುತ್ತಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದವರು (ಸಮಾಜವಾದಿ ಪಕ್ಷವನ್ನು ಉದ್ದೇಶಿಸಿ) ಬಡವರ ನೋವಿನ ಬಗ್ಗೆ ಗಮನವನ್ನೇ ಹರಿಸಿಲ್ಲ. ಹಿಂದಿನ ಸರ್ಕಾರಗಳು ಭ್ರಷ್ಟಾಚಾರ ಮತ್ತು ಅಪರಾಧ ಕೃತ್ಯಗಳ ಜತೆಗೆ ನಂಟು ಹೊಂದಿದ್ದವು ಎಂದು ಮೋದಿ ಆರೋಪಿಸಿದ್ದಾರೆ.</p>.<p>ಇವರು ಸಮಾಜವಾದಿಗಳಲ್ಲ, ವಂಶಾಡಳಿತವಾದಿಗಳು ಎಂಬುದು ಉತ್ತರ ಪ್ರದೇಶದ ಜನತೆಗೆ ಚೆನ್ನಾಗಿ ಗೊತ್ತಿದೆ ಎಂದೂ ಅವರು ಹೇಳಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶೀನಗರ:</strong> ‘ಸಮಾಜವಾದಿ ಪಕ್ಷವು ರಾಮ ಮನೋಹರ್ ಲೋಹಿಯಾ ಅವರ ಸಿದ್ಧಾಂತದಿಂದ ಬದಲಾಗಿದೆ. ಆ ಪಕ್ಷದ ನಾಯಕರು ಈಗ ‘ಪರಿವಾರವಾದ’ವನ್ನು (ವಂಶ ರಾಜಕಾರಣ) ಉತ್ತೇಜಿಸುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.</p>.<p>ಉತ್ತರ ಪ್ರದೇಶದ ಕುಶೀನಗರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಹಾಗೂ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ರ್ಯಾಲಿಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/pm-narendra-modi-to-cvc-cbi-says-ensure-no-safe-havens-anywhere-for-those-who-betray-india-877002.html" itemprop="url">ದೇಶ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಬಿಐ, ಸಿವಿಸಿಗೆ ಪ್ರಧಾನಿ ಮೋದಿ</a></p>.<p>ಸಹಾನುಭೂತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ರಾಮ ಮನೋಹರ್ ಲೋಹಿಯಾ ಅವರು ಹೇಳುತ್ತಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದವರು (ಸಮಾಜವಾದಿ ಪಕ್ಷವನ್ನು ಉದ್ದೇಶಿಸಿ) ಬಡವರ ನೋವಿನ ಬಗ್ಗೆ ಗಮನವನ್ನೇ ಹರಿಸಿಲ್ಲ. ಹಿಂದಿನ ಸರ್ಕಾರಗಳು ಭ್ರಷ್ಟಾಚಾರ ಮತ್ತು ಅಪರಾಧ ಕೃತ್ಯಗಳ ಜತೆಗೆ ನಂಟು ಹೊಂದಿದ್ದವು ಎಂದು ಮೋದಿ ಆರೋಪಿಸಿದ್ದಾರೆ.</p>.<p>ಇವರು ಸಮಾಜವಾದಿಗಳಲ್ಲ, ವಂಶಾಡಳಿತವಾದಿಗಳು ಎಂಬುದು ಉತ್ತರ ಪ್ರದೇಶದ ಜನತೆಗೆ ಚೆನ್ನಾಗಿ ಗೊತ್ತಿದೆ ಎಂದೂ ಅವರು ಹೇಳಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>