ಭಾಷಣದುದ್ದಕ್ಕೂ ಕಾಂಗ್ರೆಸ್ ಅನ್ನು ಗುರಿಯಾಗಿಸಿ ಮಾತನಾಡಿದ ಪ್ರಧಾನಿ ಮೋದಿ, ‘ವಾಸ್ತವ ಮತ್ತು ಭವಿಷ್ಯದ ಕುರಿತು ಚಿಂತಿಸದವರು ಜಲ ಸಂರಕ್ಷಣೆ ಕುರಿತು ಕೇವಲ ಮಾತನಾಡುತ್ತಿದ್ದರು. ಆದರೆ, ಜಲ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಯಾವ ಕೆಲಸವನ್ನೂ ಮಾಡಲಿಲ್ಲ. ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ, ಕೇವಲ ಮೂರು ಕೋಟಿ ಗ್ರಾಮೀಣ ಕುಟುಂಬಗಳಿಗೆ ಕೊಳವೆ ನೀರಿನ ಸಂಪರ್ಕ ಒದಗಿಸಲಾಗಿತ್ತು. ಆದರೆ, ಕಳೆದ ಮೂರು ವರ್ಷಗಳಲ್ಲಿ ಏಳು ಕೋಟಿ ಹೆಚ್ಚುವರಿ ಕೊಳವೆ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ’ ಎಂದರು.