ಉತ್ತರ ಪ್ರದೇಶದ ಉನ್ನಾವೊದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕುಟುಂಬಸ್ಥರ ವೈಭವದ ಅಧಿಕಾರವಿದ್ದಾಗ ಘೋರ ಅಪರಾಧ ಪ್ರಕರಣಗಳ ಆರೋಪಿಗಳು ಮತ್ತು ಮಾಫಿಯಾಗಳು ಸಚಿವ ಸಂಪುಟದ ಭಾಗವಾಗಿದ್ದರು. ಮಾಫಿಯಾಗಳು ಆಡಳಿತದ ಮೇಲೆ ನೇರ ಪರಿಣಾಮ ಬೀರುತ್ತಿದ್ದರು. ಉತ್ತರ ಪ್ರದೇಶದ ಜನರಿಗೆ ಪ್ರಯೋಜನವಾಗುವುದು ಅವರಿಗೆ ಬೇಕಿರಲಿಲ್ಲ. ತಾವು ಅಧಿಕಾರದಲ್ಲಿ ಇರಬೇಕು ಎಂಬುದಷ್ಟೇ ಅವರ ಗುರಿಯಾಗಿತ್ತು’ ಎಂದು ಸಮಾಜವಾದಿ ಪಕ್ಷವನ್ನು ಉದ್ದೇಶಿಸಿ ಪರೋಕ್ಷವಾಗಿ ಟೀಕಿಸಿದ್ದಾರೆ.