<p class="title"><strong>ಲಖನೌ: </strong>ಬಿಲ್ಡರ್ಗಳು ಮತ್ತು ಮನೆ ಖರೀದಿದಾರರ ನಡುವೆ ವಿಶ್ವಾಸ ಮೂಡಿಸುವುದು ಮತ್ತು ಸಮಸ್ಯೆಗಳನ್ನು ನಿವಾರಿಸುವ ಕ್ರಮವಾಗಿ ರೇರಾ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.</p>.<p class="title">ವಿಡಿಯೊ ಕಾನ್ಫರೆನ್ಸ್ನಲ್ಲಿ ಆಗ್ರಾ ಮೆಟ್ರೊ ಯೋಜನೆಗೆ ಚಾಲನೆ ನೀಡಿದ ಅವರು, ದುರುದ್ದೇಶ ಚಿಂತನೆಯ ಜನರು ರಿಯಲ್ ಎಸ್ಟೇಟ್ ವಲಯಕ್ಕೆ ಕೆಟ್ಟ ಹೆಸರು ತಂದಿದ್ದರು. ಇದರಿಂದ ಮಧ್ಯಮವರ್ಗದ ಜನರು ಭ್ರಮನಿರಸನಗೊಂಡಿದ್ದರು ಎಂದರು.</p>.<p class="title">ವಸತಿ ನಿರ್ಮಾಣಗಾರರು ಮತ್ತು ಗ್ರಾಹಕರ ನಡುವೆ ವಿಶ್ವಾಸದ ಕೊರತೆ ಇತ್ತು. ಈ ಕೊರತೆ ನೀಗಿಸಲು ರೇರಾ ತರಲಾಗಿದೆ. ವರದಿಗಳ ಪ್ರಕಾರ, ಕಾಯ್ದೆ ಜಾರಿಗೊಂಡ ಬಳಿಕ ಮಧ್ಯಮ ವರ್ಗದ ಮನೆಗಳು ತ್ವರಿತವಾಗಿ ನಿರ್ಮಾಣಗೊಳ್ಳುತ್ತಿವೆ ಎಂದರು.</p>.<p class="title"><strong>ಇದನ್ನೂ ಓದಿ:</strong><a href="https://www.prajavani.net/india-news/reforms-needed-for-development-says-pm-785142.html" itemprop="url">ಅಭಿವೃದ್ಧಿಗಾಗಿ ಸುಧಾರಣೆ ಕ್ರಮಗಳು ಅಗತ್ಯ: ಪ್ರಧಾನಿ ಮೋದಿ</a></p>.<p>ಆಧುನಿಕ ಸಾರಿಗೆ ವ್ಯವಸ್ಥೆಯಿಂದ ವಸತಿ ಯೋಜನೆವರಿಗೆ ಸಮಗ್ರ ಅಭಿವೃದ್ಧಿಯಿಂದ ಮಾತ್ರವೇ ನಗರ ಜೀವನ ಸುಲಲಿತವಾಗಲಿದೆ ಎಂದರು. ಪ್ರಧಾನಮಂತ್ರಿ ಆವಾಸ್ ಯೋಜನಾದಡಿ ಸುಮಾರು ಒಂದು ಕೋಟಿ ಮನೆಗಳನ್ನು ನಗರ ಪ್ರದೇಶದ ಬಡಜನರಿಗೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.</p>.<p>ಇದೇ ಮೊದಲ ಬಾರಿಗೆ ನಗರ ಪ್ರದೇಶದಲ್ಲಿ ಬಡಜನರಿಗೆ ಮನೆ ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಇದುವರೆಗೆ ಸುಮಾರು 12 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಮನೆ ಖರೀದಿಗಾಗಿ ₹ 28 ಸಾವಿರ ಕೋಟಿ ಒದಗಿಸಲಾಗಿದೆ ಎಂದರು.</p>.<p>20ನೇ ಶತಮಾನದಲ್ಲಿ ಮೆಟ್ರೊ ನಗರಗಳು ವಹಿಸಿದ ಪಾತ್ರವನ್ನು ಈಗ ಆಗ್ರಾದಂತಹ ಮಧ್ಯಮ ಕ್ರಮದ ನಗರಗಳು ನಿರ್ವಹಿಸುತ್ತಿವೆ. ನೂರಾರು ವರ್ಷಗಳ ಇತಿಹಾಸವುಳ್ಳ ಆಗ್ರಾ ಇದು 21ನೇ ಶತಮಾನದ ಅಗತ್ಯಗಳಿಗೆ ಹೊಂದಿಕೊಳ್ಳುತ್ತಿದೆ ಎಂದು ಪ್ರಧಾನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ: </strong>ಬಿಲ್ಡರ್ಗಳು ಮತ್ತು ಮನೆ ಖರೀದಿದಾರರ ನಡುವೆ ವಿಶ್ವಾಸ ಮೂಡಿಸುವುದು ಮತ್ತು ಸಮಸ್ಯೆಗಳನ್ನು ನಿವಾರಿಸುವ ಕ್ರಮವಾಗಿ ರೇರಾ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.</p>.<p class="title">ವಿಡಿಯೊ ಕಾನ್ಫರೆನ್ಸ್ನಲ್ಲಿ ಆಗ್ರಾ ಮೆಟ್ರೊ ಯೋಜನೆಗೆ ಚಾಲನೆ ನೀಡಿದ ಅವರು, ದುರುದ್ದೇಶ ಚಿಂತನೆಯ ಜನರು ರಿಯಲ್ ಎಸ್ಟೇಟ್ ವಲಯಕ್ಕೆ ಕೆಟ್ಟ ಹೆಸರು ತಂದಿದ್ದರು. ಇದರಿಂದ ಮಧ್ಯಮವರ್ಗದ ಜನರು ಭ್ರಮನಿರಸನಗೊಂಡಿದ್ದರು ಎಂದರು.</p>.<p class="title">ವಸತಿ ನಿರ್ಮಾಣಗಾರರು ಮತ್ತು ಗ್ರಾಹಕರ ನಡುವೆ ವಿಶ್ವಾಸದ ಕೊರತೆ ಇತ್ತು. ಈ ಕೊರತೆ ನೀಗಿಸಲು ರೇರಾ ತರಲಾಗಿದೆ. ವರದಿಗಳ ಪ್ರಕಾರ, ಕಾಯ್ದೆ ಜಾರಿಗೊಂಡ ಬಳಿಕ ಮಧ್ಯಮ ವರ್ಗದ ಮನೆಗಳು ತ್ವರಿತವಾಗಿ ನಿರ್ಮಾಣಗೊಳ್ಳುತ್ತಿವೆ ಎಂದರು.</p>.<p class="title"><strong>ಇದನ್ನೂ ಓದಿ:</strong><a href="https://www.prajavani.net/india-news/reforms-needed-for-development-says-pm-785142.html" itemprop="url">ಅಭಿವೃದ್ಧಿಗಾಗಿ ಸುಧಾರಣೆ ಕ್ರಮಗಳು ಅಗತ್ಯ: ಪ್ರಧಾನಿ ಮೋದಿ</a></p>.<p>ಆಧುನಿಕ ಸಾರಿಗೆ ವ್ಯವಸ್ಥೆಯಿಂದ ವಸತಿ ಯೋಜನೆವರಿಗೆ ಸಮಗ್ರ ಅಭಿವೃದ್ಧಿಯಿಂದ ಮಾತ್ರವೇ ನಗರ ಜೀವನ ಸುಲಲಿತವಾಗಲಿದೆ ಎಂದರು. ಪ್ರಧಾನಮಂತ್ರಿ ಆವಾಸ್ ಯೋಜನಾದಡಿ ಸುಮಾರು ಒಂದು ಕೋಟಿ ಮನೆಗಳನ್ನು ನಗರ ಪ್ರದೇಶದ ಬಡಜನರಿಗೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.</p>.<p>ಇದೇ ಮೊದಲ ಬಾರಿಗೆ ನಗರ ಪ್ರದೇಶದಲ್ಲಿ ಬಡಜನರಿಗೆ ಮನೆ ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಇದುವರೆಗೆ ಸುಮಾರು 12 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಮನೆ ಖರೀದಿಗಾಗಿ ₹ 28 ಸಾವಿರ ಕೋಟಿ ಒದಗಿಸಲಾಗಿದೆ ಎಂದರು.</p>.<p>20ನೇ ಶತಮಾನದಲ್ಲಿ ಮೆಟ್ರೊ ನಗರಗಳು ವಹಿಸಿದ ಪಾತ್ರವನ್ನು ಈಗ ಆಗ್ರಾದಂತಹ ಮಧ್ಯಮ ಕ್ರಮದ ನಗರಗಳು ನಿರ್ವಹಿಸುತ್ತಿವೆ. ನೂರಾರು ವರ್ಷಗಳ ಇತಿಹಾಸವುಳ್ಳ ಆಗ್ರಾ ಇದು 21ನೇ ಶತಮಾನದ ಅಗತ್ಯಗಳಿಗೆ ಹೊಂದಿಕೊಳ್ಳುತ್ತಿದೆ ಎಂದು ಪ್ರಧಾನಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>