ಪುಷ್ಕರ್ ಸಿಂಗ್ ಅವರು, ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಮತ್ತು ಸದ್ಯದ ಪರಿಸ್ಥಿತಿ ಕುರಿತು ಪ್ರಧಾನಿಯವರಿಗೆ ವಿವರಿಸಿದರು. ಪರಿಸ್ಥಿತಿ ನಿಭಾಯಿಸಲು ನಮ್ಮ ಸರ್ಕಾರ ಸದಾ ಸಿದ್ಧವಾಗಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ, ‘ಪರಿಸ್ಥಿತಿ ನಿಭಾಯಿಸಲು ಕೇಂದ್ರದಿಂದ ಅಗತ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ‘ ತಿಳಿಸಿದರು.