‘ನಮಾಮಿ ಗಂಗೆ’ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಗಂಗಾ ನದಿ ಶುದ್ಧೀಕರಣ ಹಾಗೂ ನದಿ ವ್ಯಾಪ್ತಿಯಲ್ಲಿ ಮಾಲಿನ್ಯದ ಪ್ರಮಾಣವನ್ನು ತಗ್ಗಿಸುವುದು ಯೋಜನೆಯ ಮುಖ್ಯ ಉದ್ದೇಶ. ತ್ಯಾಜ್ಯ ನಿರ್ವಹಣೆ, ನದಿಪಾತ್ರ ಅಭಿವೃದ್ಧಿ, ಅರಣ್ಯೀಕರಣ, ಗ್ರಾಮೀಣ ನೈರ್ಮಲ್ಯ ಸೌಲಭ್ಯ, ಜೀವವೈವಿಧ್ಯ ರಕ್ಷಣೆ ಮೊದಲಾದ ಆಯಾಮಗಳನ್ನು ಯೋಜನೆ ಒಳಗೊಂಡಿದೆ.