ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರುದೇಶದ ಮುಂಚೂಣಿಯ ಅರ್ಥಶಾಸ್ತ್ರಜ್ಞರ ಜತೆಗೆ ಶುಕ್ರವಾರ ಸಂವಾದ ನಡೆಸಲಿದ್ದಾರೆ. ನೀತಿ ಆಯೋಗವು ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ, ಕೋವಿಡ್–19 ಕಾರಣದಿಂದಾಗಿ ಅನೇಕ ಕ್ಷೇತ್ರದಲ್ಲಿ ಆಗಿರುವ ಅನಿಶ್ಚಿತತೆಯನ್ನು ನಿವಾರಿಸಲು ಬಜೆಟ್ನಲ್ಲಿ ಯಾವೆಲ್ಲ ಯೋಜನೆಗಳನ್ನು ರೂಪಿಸಬೇಕು ಎಂಬ ಬಗ್ಗೆ ಸಲಹೆಗಳನ್ನು ಪಡೆಯಲಿದ್ದಾರೆ ಎನ್ನಲಾಗಿದೆ.