<p><strong>ನವದೆಹಲಿ</strong>: ‘ತೌಕ್ತೆ’ ಚಂಡಮಾರುತವನ್ನು ಎದುರಿಸಲು ನಡೆದಿರುವ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.</p>.<p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.</p>.<p>ಅರಬ್ಬಿ ಸಮದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದೇ 17ರಂದು ತೀವ್ರ ಚಂಡಮಾರುತ ಎದುರಾಗುವ ಸಾಧ್ಯತೆ ಇದೆ. ಅದು ಒಂದು ದಿನದ ಬಳಿಕ ಗುಜರಾತ್ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/dakshina-kannada/arabian-sea-mangalore-dakshina-kannada-wind-rain-830518.html" itemprop="url">ಚಂಡಮಾರುತದ ಭೀತಿ ಕರಾವಳಿಯಲ್ಲಿ ಕಡಲ್ಕೊರೆತ ತೀವ್ರ </a></p>.<p>ಚಂಡಮಾರುತವು ಶನಿವಾರ ಬೆಳಿಗ್ಗೆಯಿಂದಲೇ ಪ್ರಬಲಗೊಳ್ಳಲಿದ್ದು, ಶನಿವಾರ ರಾತ್ರಿ ವೇಳೆಗೆ ಭಾರಿ ಮಳೆ ಸುರಿಸುತ್ತದೆ ಎಂದು ಐಎಂಡಿ ತಿಳಿಸಿದೆ.</p>.<p>ತೌಕ್ತೆ ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್ಡಿಆರ್ಎಫ್) ಈಗಾಗಲೇ ತನ್ನ 53 ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ತೌಕ್ತೆ’ ಚಂಡಮಾರುತವನ್ನು ಎದುರಿಸಲು ನಡೆದಿರುವ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.</p>.<p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ಹಿರಿಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.</p>.<p>ಅರಬ್ಬಿ ಸಮದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದೇ 17ರಂದು ತೀವ್ರ ಚಂಡಮಾರುತ ಎದುರಾಗುವ ಸಾಧ್ಯತೆ ಇದೆ. ಅದು ಒಂದು ದಿನದ ಬಳಿಕ ಗುಜರಾತ್ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/dakshina-kannada/arabian-sea-mangalore-dakshina-kannada-wind-rain-830518.html" itemprop="url">ಚಂಡಮಾರುತದ ಭೀತಿ ಕರಾವಳಿಯಲ್ಲಿ ಕಡಲ್ಕೊರೆತ ತೀವ್ರ </a></p>.<p>ಚಂಡಮಾರುತವು ಶನಿವಾರ ಬೆಳಿಗ್ಗೆಯಿಂದಲೇ ಪ್ರಬಲಗೊಳ್ಳಲಿದ್ದು, ಶನಿವಾರ ರಾತ್ರಿ ವೇಳೆಗೆ ಭಾರಿ ಮಳೆ ಸುರಿಸುತ್ತದೆ ಎಂದು ಐಎಂಡಿ ತಿಳಿಸಿದೆ.</p>.<p>ತೌಕ್ತೆ ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್ಡಿಆರ್ಎಫ್) ಈಗಾಗಲೇ ತನ್ನ 53 ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>