ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯಾಗ್ ರಾಜ್: ಸ್ವಸಹಾಯ ಸಂಘಗಳಿಗೆ ₹ 1000 ಕೋಟಿ ಬಿಡುಗಡೆ ಮಾಡಿದ ಮೋದಿ

Last Updated 21 ಡಿಸೆಂಬರ್ 2021, 9:37 IST
ಅಕ್ಷರ ಗಾತ್ರ

ಪ್ರಯಾಗ್ ರಾಜ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 16 ಲಕ್ಷ ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ₹1,000 ಕೋಟಿ ಹಣ ವರ್ಗಾವಣೆ ಮಾಡಿದ್ದಾರೆ.

ಈ ಮೊತ್ತವನ್ನು ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ವರ್ಗಾಯಿಸಲಾಗಿದೆ.

ಮಹಿಳೆಯರಿಗೆ, ವಿಶೇಷವಾಗಿ ತಳಮಟ್ಟದಲ್ಲಿರುವವರಿಗೆ ಅಗತ್ಯ ಕೌಶಲ್ಯ, ಪ್ರೋತ್ಸಾಹ ಮತ್ತು ಸಂಪನ್ಮೂಲಗಳನ್ನು ಒದಗಿಸುವ ಗುರಿಯನ್ನು ಈ ಮಿಷನ್ ಹೊಂದಿದೆ.

ಕಾರ್ಯಕ್ರಮದಲ್ಲಿ 2 ಲಕ್ಷಕ್ಕೂ ಅಧಿಕ ಮಹಿಳೆಯರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದರು.

ಮುಖ್ಯಮಂತ್ರಿ ಕನ್ಯಾ ಸುಮಂಗಲಾ ಯೋಜನೆಯಡಿ 1 ಲಕ್ಷ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ₹20 ಕೋಟಿ ರೂಪಾಯಿಗಳನ್ನೂ ಸಹ ಮೋದಿ ಬಿಡುಗಡೆ ಮಾಡಿದರು. ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ₹ 15,000 ಸಿಗಲಿದೆ.

43 ಜಿಲ್ಲೆಗಳಲ್ಲಿ 202 ಪೂರಕ ಪೌಷ್ಟಿಕಾಂಶ ಉತ್ಪಾದನಾ ಘಟಕಗಳ ಶಂಕುಸ್ಥಾಪನೆಯನ್ನೂ ಪ್ರಧಾನಿ ನೆರವೇರಿಸಿದ್ದಾರೆ. ಈ ಘಟಕಗಳಿಗೆ ಸ್ವಸಹಾಯ ಸಂಘಗಳಿಂದ ಹಣ ನೀಡಲಾಗುತ್ತಿದ್ದು, ಪ್ರತಿ ಘಟಕವನ್ನು ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT