<p><strong>ಚೆನ್ನೈ</strong>: ಬೆಂಗಳೂರು–ಚೆನ್ನೈ ನಡುವೆಅಂದಾಜು ₹ 14,870 ಕೋಟಿ ವೆಚ್ಚದಲ್ಲಿ 262 ಕಿ.ಮೀ ನೂತನ ಹೆದ್ದಾರಿ ಅಭಿವೃದ್ಧಿ ಪಡಿಸುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಲ್ಲಿ ಚಾಲನೆ ನೀಡಿದರು.</p>.<p>ಉದ್ದೇಶಿತ ಹೆದ್ದಾರಿ ಅಭಿವೃದ್ಧಿಯಿಂದ ಉಭಯ ನಗರಗಳ ನಡುವಿನ ಪ್ರಯಾಣದ ಅವಧಿ ಸುಮಾರು 2–3 ಗಂಟೆ ಕಡಿಮೆಯಾಗಲಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳ ಮೂಲಕ ನೂತನ ಹೆದ್ದಾರಿ ಹಾದುಹೋಗಲಿದೆ.</p>.<p>ಇದು ಸೇರಿದಂತೆ₹ 28,000 ಕೋಟಿ ಅಂದಾಜು ವೆಚ್ಚದ ಆರು ವಿವಿಧ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.</p>.<p><strong>ಉದ್ಘಾಟನೆ</strong>:ಅಲ್ಲದೆ, ಸುಮಾರು 2,960 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಐದು ವಿವಿಧ ಯೋಜನೆಗಳನ್ನು ಪ್ರಧಾನಿ ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು.</p>.<p>ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ‘ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ನೆರವು ನೀಡಬೇಕು. ರಾಜ್ಯದಲ್ಲಿ ಅಭಿವೃದ್ಧಿ ಆರ್ಥಿಕ ಮಾನದಂಡವನ್ನಷ್ಟೇ ಒಳಗೊಂಡಿಲ್ಲ, ಸಮಗ್ರ ಅಭಿವೃದ್ಧಿಗೆ ಒತ್ತುನೀಡುವ ದ್ರಾವಿಡ ಮಾದರಿಯದ್ದಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಬೆಂಗಳೂರು–ಚೆನ್ನೈ ನಡುವೆಅಂದಾಜು ₹ 14,870 ಕೋಟಿ ವೆಚ್ಚದಲ್ಲಿ 262 ಕಿ.ಮೀ ನೂತನ ಹೆದ್ದಾರಿ ಅಭಿವೃದ್ಧಿ ಪಡಿಸುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಲ್ಲಿ ಚಾಲನೆ ನೀಡಿದರು.</p>.<p>ಉದ್ದೇಶಿತ ಹೆದ್ದಾರಿ ಅಭಿವೃದ್ಧಿಯಿಂದ ಉಭಯ ನಗರಗಳ ನಡುವಿನ ಪ್ರಯಾಣದ ಅವಧಿ ಸುಮಾರು 2–3 ಗಂಟೆ ಕಡಿಮೆಯಾಗಲಿದೆ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳ ಮೂಲಕ ನೂತನ ಹೆದ್ದಾರಿ ಹಾದುಹೋಗಲಿದೆ.</p>.<p>ಇದು ಸೇರಿದಂತೆ₹ 28,000 ಕೋಟಿ ಅಂದಾಜು ವೆಚ್ಚದ ಆರು ವಿವಿಧ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.</p>.<p><strong>ಉದ್ಘಾಟನೆ</strong>:ಅಲ್ಲದೆ, ಸುಮಾರು 2,960 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿರುವ ಐದು ವಿವಿಧ ಯೋಜನೆಗಳನ್ನು ಪ್ರಧಾನಿ ಇದೇ ಸಂದರ್ಭದಲ್ಲಿ ಉದ್ಘಾಟಿಸಿದರು.</p>.<p>ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ‘ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ನೆರವು ನೀಡಬೇಕು. ರಾಜ್ಯದಲ್ಲಿ ಅಭಿವೃದ್ಧಿ ಆರ್ಥಿಕ ಮಾನದಂಡವನ್ನಷ್ಟೇ ಒಳಗೊಂಡಿಲ್ಲ, ಸಮಗ್ರ ಅಭಿವೃದ್ಧಿಗೆ ಒತ್ತುನೀಡುವ ದ್ರಾವಿಡ ಮಾದರಿಯದ್ದಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>