ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಸ್ಥಿತಿಗತಿಯ ಬಗ್ಗೆ ತಿಳಿಸಲು ಪತ್ರಿಕಾಗೋಷ್ಠಿ ಕರೆದಿದ್ದ ಅವರು, ‘ನಮ್ಮ ಹೋರಾಟದ ವೇಳೆ ಸರ್ಕಾರವು ಇಂಟರ್ನೆಟ್ ಸ್ಥಗಿತಗೊಳಿಸಿತು. ಸರ್ಕಾರ ನಮ್ಮ ಹೆಸರು ಕೆಡಿಸುವ ಪ್ರಯತ್ನವನ್ನೂ ಮಾಡಿತು. ಶಾಂತಿಯುತ ಪ್ರತಿಭಟನೆ ನಡೆಸುವಂತೆ ನಾನು ರೈತರಲ್ಲಿ ಮನವಿ ಮಾಡುತ್ತೇನೆ. ಹೋರಾಟವು ಶಾಂತಿಯುತವಾಗಿ ಸಾಗದಿದ್ದರೆ, ಪ್ರಧಾನಿ ಮೋದಿ ಗೆಲುವು ಸಾಧಿಸಲಿದ್ದಾರೆ’ ಎಂದು ಶನಿವಾರ ಹೇಳಿದ್ದಾರೆ.