ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಉದ್ದೇಶಿಸಿ ಮಾಡಿದ ಭಾಷಣದ ಮುಖ್ಯಾಂಶಗಳು ಇಲ್ಲಿವೆ;
*ಜೂ.21ರಂದು ಅಂತರರಾಷ್ಟ್ರೀಯ ಯೋಗ ದಿವಸ. ಆ ದಿನದಿಂದ 18 ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುತ್ತದೆ.
*ಯಾವುದೇ ರಾಜ್ಯಸರ್ಕಾರಗಳಿಗೆ ಲಸಿಕಾಕರಣಕ್ಕಾಗಿ ಯಾವುದೇ ಹಣವನ್ನು ಪಾವತಿಸಬೇಕಿಲ್ಲ.
* ದೇಶದ ಎಲ್ಲ ಜನರಿಗೆ ಕೇಂದ್ರಸರ್ಕಾರವೇ ಉಚಿತವಾಗಿ ಲಸಿಕೆಯನ್ನು ನೀಡಲಿದೆ
*ಉಚಿತ ಲಸಿಕೆ ಬೇಡ ಎಂದುಕೊಂಡವರಿಗೆ, ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವ ಸಾಮರ್ಥ್ಯ ಇರುವವರಿಗಾಗಿ ಅಂಥವರಿಗಾಗಿಯೇ ಖಾಸಗಿ ಆಸ್ಪತ್ರೆಗಳಿಗೂ ಶೇ.25 ಲಸಿಕೆಗಳನ್ನು ಒದಗಿಸಲಾಗುತ್ತದೆ.
*ಅವರು ಗರಿಷ್ಠ 150 ರೂ. ಸೇವಾ ಶುಲ್ಕ ತೆಗೆದುಕೊಂಡು, ಲಸಿಕೆಯನ್ನು ನೀಡಬಹುದು.
*ಹಿಂದಿನ ವರ್ಷ ಕೊರೊನಾ ಕಾರಣದಿಂದ ಲಾಕ್ಡೌನ್ ಮಾಡಲಾಗಿತ್ತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಮಂದಿಗೆ ಉಚಿರ ರೇಷನ್ ಒದಗಿಸಲಾಗಿತ್ತು.
*ಈ ವರ್ಷವೂ ಮೇ ಹಾಗೂ ಜೂನ್ ತಿಂಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ.
*ಈ ಯೋಜನೆಯು ದೀಪಾವಳಿವರೆಗೂ ಮುಂದುವರಿಯಲಿದೆ.
*ಪ್ರತಿಯೊಬ್ಬ ಬಡ ನಾಗರಿಕರ ಜತೆಗೆ ಸರ್ಕಾರವೂ ಇದೆ. ನವೆಂಬರ್ವರೆಗೆ ಎಲ್ಲ 80 ಕೋಟಿ ಮಂದಿಗೆ, ಉಚಿತವಾಗಿ ಧಾನ್ಯ ವಿತರಿಸಲಾಗುತ್ತದೆ.
*ವಿಶ್ವಾಸೇನ ಸಿದ್ಧಿ: ವಿಶ್ವಾಸದಿಂದಲೇ ಸಿದ್ಧಿ ಎಂಬ ಭಾರತದ ಮೂಲಮಂತ್ರಕ್ಕೆ ಪೂರಕವಾಗಿ, 23 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ. ಭಾರತದಂತಹಾ ವಿಶಾಲ ದೇಶದಲ್ಲಿ ಇದೊಂದು ಬಲು ದೊಡ್ಡ ಸಾಧನೆ.
*ಭಾರತದಲ್ಲಿ ಲಸಿಕೆ ತಯಾರಿಸುವ ಕಂಪನಿಗಳಿಗೆ ಎಲ್ಲ ರೀತಿಯಲ್ಲೂ ಸರ್ಕಾರವು ನೆರವು ನೀಡಿ, ಭುಜಕ್ಕೆ ಭುಜ ಕೊಟ್ಟು ಗಟ್ಟಿಯಾಗಿ ನಿಂತಿದೆ.
*ಇಂದು, ದೇಶಗಳಲ್ಲಿ 7 ಕಂಪನಿಗಳು ವಿಭಿನ್ನ ರೀತಿಯ ಲಸಿಕೆಗಳನ್ನು ಉತ್ಪಾದಿಸಲು ಆರಂಭಿಸಿವೆ.
*ಬೇರೆ ದೇಶಗಳಿಂದಲೂ ಲಸಿಕೆ ಖರೀದಿ ಪ್ರಕ್ರಿಯೆಗಳಿಗೆ ವೇಗ ನೀಡಲಾಗಿದೆ.
*ಮೂಗಿನ ಮೂಲಕಸಿಂಪಡಿಸಲಾಗುವ ಲಸಿಕೆಯ ಪ್ರಯೋಗವೂ ನಡೆಯುತ್ತಿದೆ.
*ಇದಕ್ಕೆ ಯಶಸ್ಸು ಸಿಕ್ಕಿದರೆ, ಭಾರತದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ಸಿಗುತ್ತದೆ.
*ಇಷ್ಟು ಕಡಿಮೆ ಸಮಯದಲ್ಲಿ ಲಸಿಕೆ ತಯಾರಿಸುವುದು ಇಡೀ ಮಾನವ ಕುಲಕ್ಕೆ ಬಲು ದೊಡ್ಡ ಉಪಯೋಗ.
*ಇದೀಗ ಮೂರನೇ ಅಲೆಯ ಆತಂಕವಿರುವುದರಿಂದಾಗಿ, ಮಕ್ಕಳಿಗಾಗಿ ಎರಡು ಲಸಿಕೆಗಳ ಪ್ರಯೋಗವೂ ವೇಗವಾಗಿ ನಡೆಯುತ್ತಿದೆ.
*ಭಾರತದಲ್ಲಿ ಲಸಿಕೆ ಬಗ್ಗೆ ಕಾರ್ಯಕ್ರಮ ಆರಂಭವಾದಂದಿನಿಂದಲೇ ಕೆಲವು ಮಂದಿ ಜನ ಸಾಮಾನ್ಯರ ಮನಸ್ಸಿನಲ್ಲಿ ಶಂಕೆಯ ಬೀಜ ಬಿತ್ತುವ ಕೆಲಸ ಮಾಡಿದರು.
*ಭಾರತದ ಲಸಿಕೆ ಬಂದಾಗ, ಅದರ ಬಗ್ಗೆ ಶಂಕೆ ಮತ್ತಷ್ಟು ಹೆಚ್ಚುವಂತೆ ಮಾಡಲಾಯಿತು.
*ಇದನ್ನೆಲ್ಲಾ ದೇಶವೇ ನೋಡುತ್ತಿದೆ.
*ಲಸಿಕೆ ಬಗ್ಗೆ ಶಂಕೆ ಹುಟ್ಟಿಸಿಹಾಕಿದವರು ಅವರು ಮುಗ್ಧ ಜನರ ಜೀವನದ ಜೊತೆ ಚೆಲ್ಲಾಟವಾಡಿದರು. ಅಂಥವರಿಂದ ದೂರವಿರಿ.
*ಸಮಾಜದ ಪ್ರಬುದ್ಧ, ಯುವ ಜನರಲ್ಲಿ ಮನವಿ ಏನೆಂದರೆ, ಲಸಿಕೆ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರ ನೀಡಿ.
*ಕೆಲವು ಕಡೆಗಳಲ್ಲಿ ಕೊರೊನಾ ಕರ್ಫ್ಯೂ ಸಡಿಲಿಸಲಾಗುತ್ತಿದೆ. ಆದರೆ, ಕೊರೊನಾ ಓಡಿ ಹೋಗಿದೆ ಎಂದು ತಿಳಿಯಬೇಕಿಲ್ಲ. ಎಚ್ಚರಿಕೆ ವಹಿಸಲೇಬೇಕು.
*ನಾವೆಲ್ಲರೂ ಕೊರೊನಾ ವಿರುದ್ಧದ ಈ ಯುದ್ಧವನ್ನು ಜಯಿಸುತ್ತೇವೆ, ಭಾರತವು ಕೊರೊನಾ ವಿರುದ್ಧ ಜಯಿಸುತ್ತದೆ. ಎಲ್ಲರಿಗೂ ಶುಭವಾಗಲಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.