<p>ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಉದ್ದೇಶಿಸಿ ಮಾಡಿದ ಭಾಷಣದ ಮುಖ್ಯಾಂಶಗಳು ಇಲ್ಲಿವೆ;</p>.<p>*ಜೂ.21ರಂದು ಅಂತರರಾಷ್ಟ್ರೀಯ ಯೋಗ ದಿವಸ. ಆ ದಿನದಿಂದ 18 ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುತ್ತದೆ.</p>.<p>*ಯಾವುದೇ ರಾಜ್ಯಸರ್ಕಾರಗಳಿಗೆ ಲಸಿಕಾಕರಣಕ್ಕಾಗಿ ಯಾವುದೇ ಹಣವನ್ನು ಪಾವತಿಸಬೇಕಿಲ್ಲ.</p>.<p><strong>ಓದಿ:</strong><a href="https://www.prajavani.net/india-news/free-covid-19-vaccine-for-all-above-18-years-from-june-21-says-pm-narendra-modi-836821.html" itemprop="url">ಕೇಂದ್ರದಿಂದ ಉಚಿತ ಕೋವಿಡ್ ಲಸಿಕೆ, ಖರೀದಿಸಲೂ ಇದೆ ಅವಕಾಶ: ಪ್ರಧಾನಿ ಮೋದಿ</a></p>.<p>* ದೇಶದ ಎಲ್ಲ ಜನರಿಗೆ ಕೇಂದ್ರಸರ್ಕಾರವೇ ಉಚಿತವಾಗಿ ಲಸಿಕೆಯನ್ನು ನೀಡಲಿದೆ</p>.<p>*ಉಚಿತ ಲಸಿಕೆ ಬೇಡ ಎಂದುಕೊಂಡವರಿಗೆ, ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವ ಸಾಮರ್ಥ್ಯ ಇರುವವರಿಗಾಗಿ ಅಂಥವರಿಗಾಗಿಯೇ ಖಾಸಗಿ ಆಸ್ಪತ್ರೆಗಳಿಗೂ ಶೇ.25 ಲಸಿಕೆಗಳನ್ನು ಒದಗಿಸಲಾಗುತ್ತದೆ.</p>.<p><strong>ಓದಿ:</strong><a href="https://www.prajavani.net/india-news/pm-narendra-modi-address-the-nation-covid-19-crisis-and-other-important-developments-836761.html" itemprop="url">LIVE | 80 ಕೋಟಿ ಮಂದಿಗೆ ಉಚಿತ ಪಡಿತರ ಯೋಜನೆ ಮುಂದುವರಿಕೆ: ಪ್ರಧಾನಿ ಮೋದಿ ಘೋಷಣೆ</a></p>.<p>*ಅವರು ಗರಿಷ್ಠ 150 ರೂ. ಸೇವಾ ಶುಲ್ಕ ತೆಗೆದುಕೊಂಡು, ಲಸಿಕೆಯನ್ನು ನೀಡಬಹುದು.</p>.<p>*ಹಿಂದಿನ ವರ್ಷ ಕೊರೊನಾ ಕಾರಣದಿಂದ ಲಾಕ್ಡೌನ್ ಮಾಡಲಾಗಿತ್ತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಮಂದಿಗೆ ಉಚಿರ ರೇಷನ್ ಒದಗಿಸಲಾಗಿತ್ತು.</p>.<p>*ಈ ವರ್ಷವೂ ಮೇ ಹಾಗೂ ಜೂನ್ ತಿಂಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ.</p>.<p>*ಈ ಯೋಜನೆಯು ದೀಪಾವಳಿವರೆಗೂ ಮುಂದುವರಿಯಲಿದೆ.</p>.<p>*ಪ್ರತಿಯೊಬ್ಬ ಬಡ ನಾಗರಿಕರ ಜತೆಗೆ ಸರ್ಕಾರವೂ ಇದೆ. ನವೆಂಬರ್ವರೆಗೆ ಎಲ್ಲ 80 ಕೋಟಿ ಮಂದಿಗೆ, ಉಚಿತವಾಗಿ ಧಾನ್ಯ ವಿತರಿಸಲಾಗುತ್ತದೆ.</p>.<p>*<strong>ವಿಶ್ವಾಸೇನ ಸಿದ್ಧಿ: </strong>ವಿಶ್ವಾಸದಿಂದಲೇ ಸಿದ್ಧಿ ಎಂಬ ಭಾರತದ ಮೂಲಮಂತ್ರಕ್ಕೆ ಪೂರಕವಾಗಿ, 23 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ. ಭಾರತದಂತಹಾ ವಿಶಾಲ ದೇಶದಲ್ಲಿ ಇದೊಂದು ಬಲು ದೊಡ್ಡ ಸಾಧನೆ.</p>.<p>*ಭಾರತದಲ್ಲಿ ಲಸಿಕೆ ತಯಾರಿಸುವ ಕಂಪನಿಗಳಿಗೆ ಎಲ್ಲ ರೀತಿಯಲ್ಲೂ ಸರ್ಕಾರವು ನೆರವು ನೀಡಿ, ಭುಜಕ್ಕೆ ಭುಜ ಕೊಟ್ಟು ಗಟ್ಟಿಯಾಗಿ ನಿಂತಿದೆ.</p>.<p>*ಇಂದು, ದೇಶಗಳಲ್ಲಿ 7 ಕಂಪನಿಗಳು ವಿಭಿನ್ನ ರೀತಿಯ ಲಸಿಕೆಗಳನ್ನು ಉತ್ಪಾದಿಸಲು ಆರಂಭಿಸಿವೆ.</p>.<p>*ಬೇರೆ ದೇಶಗಳಿಂದಲೂ ಲಸಿಕೆ ಖರೀದಿ ಪ್ರಕ್ರಿಯೆಗಳಿಗೆ ವೇಗ ನೀಡಲಾಗಿದೆ.</p>.<p>*ಮೂಗಿನ ಮೂಲಕಸಿಂಪಡಿಸಲಾಗುವ ಲಸಿಕೆಯ ಪ್ರಯೋಗವೂ ನಡೆಯುತ್ತಿದೆ.</p>.<p>*ಇದಕ್ಕೆ ಯಶಸ್ಸು ಸಿಕ್ಕಿದರೆ, ಭಾರತದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ಸಿಗುತ್ತದೆ.</p>.<p>*ಇಷ್ಟು ಕಡಿಮೆ ಸಮಯದಲ್ಲಿ ಲಸಿಕೆ ತಯಾರಿಸುವುದು ಇಡೀ ಮಾನವ ಕುಲಕ್ಕೆ ಬಲು ದೊಡ್ಡ ಉಪಯೋಗ.</p>.<p>*ಇದೀಗ ಮೂರನೇ ಅಲೆಯ ಆತಂಕವಿರುವುದರಿಂದಾಗಿ, ಮಕ್ಕಳಿಗಾಗಿ ಎರಡು ಲಸಿಕೆಗಳ ಪ್ರಯೋಗವೂ ವೇಗವಾಗಿ ನಡೆಯುತ್ತಿದೆ.</p>.<p>*ಭಾರತದಲ್ಲಿ ಲಸಿಕೆ ಬಗ್ಗೆ ಕಾರ್ಯಕ್ರಮ ಆರಂಭವಾದಂದಿನಿಂದಲೇ ಕೆಲವು ಮಂದಿ ಜನ ಸಾಮಾನ್ಯರ ಮನಸ್ಸಿನಲ್ಲಿ ಶಂಕೆಯ ಬೀಜ ಬಿತ್ತುವ ಕೆಲಸ ಮಾಡಿದರು.</p>.<p>*ಭಾರತದ ಲಸಿಕೆ ಬಂದಾಗ, ಅದರ ಬಗ್ಗೆ ಶಂಕೆ ಮತ್ತಷ್ಟು ಹೆಚ್ಚುವಂತೆ ಮಾಡಲಾಯಿತು.</p>.<p>*ಇದನ್ನೆಲ್ಲಾ ದೇಶವೇ ನೋಡುತ್ತಿದೆ.</p>.<p>*ಲಸಿಕೆ ಬಗ್ಗೆ ಶಂಕೆ ಹುಟ್ಟಿಸಿಹಾಕಿದವರು ಅವರು ಮುಗ್ಧ ಜನರ ಜೀವನದ ಜೊತೆ ಚೆಲ್ಲಾಟವಾಡಿದರು. ಅಂಥವರಿಂದ ದೂರವಿರಿ.</p>.<p>*ಸಮಾಜದ ಪ್ರಬುದ್ಧ, ಯುವ ಜನರಲ್ಲಿ ಮನವಿ ಏನೆಂದರೆ, ಲಸಿಕೆ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರ ನೀಡಿ.</p>.<p>*ಕೆಲವು ಕಡೆಗಳಲ್ಲಿ ಕೊರೊನಾ ಕರ್ಫ್ಯೂ ಸಡಿಲಿಸಲಾಗುತ್ತಿದೆ. ಆದರೆ, ಕೊರೊನಾ ಓಡಿ ಹೋಗಿದೆ ಎಂದು ತಿಳಿಯಬೇಕಿಲ್ಲ. ಎಚ್ಚರಿಕೆ ವಹಿಸಲೇಬೇಕು.</p>.<p>*ನಾವೆಲ್ಲರೂ ಕೊರೊನಾ ವಿರುದ್ಧದ ಈ ಯುದ್ಧವನ್ನು ಜಯಿಸುತ್ತೇವೆ, ಭಾರತವು ಕೊರೊನಾ ವಿರುದ್ಧ ಜಯಿಸುತ್ತದೆ. ಎಲ್ಲರಿಗೂ ಶುಭವಾಗಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಉದ್ದೇಶಿಸಿ ಮಾಡಿದ ಭಾಷಣದ ಮುಖ್ಯಾಂಶಗಳು ಇಲ್ಲಿವೆ;</p>.<p>*ಜೂ.21ರಂದು ಅಂತರರಾಷ್ಟ್ರೀಯ ಯೋಗ ದಿವಸ. ಆ ದಿನದಿಂದ 18 ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುತ್ತದೆ.</p>.<p>*ಯಾವುದೇ ರಾಜ್ಯಸರ್ಕಾರಗಳಿಗೆ ಲಸಿಕಾಕರಣಕ್ಕಾಗಿ ಯಾವುದೇ ಹಣವನ್ನು ಪಾವತಿಸಬೇಕಿಲ್ಲ.</p>.<p><strong>ಓದಿ:</strong><a href="https://www.prajavani.net/india-news/free-covid-19-vaccine-for-all-above-18-years-from-june-21-says-pm-narendra-modi-836821.html" itemprop="url">ಕೇಂದ್ರದಿಂದ ಉಚಿತ ಕೋವಿಡ್ ಲಸಿಕೆ, ಖರೀದಿಸಲೂ ಇದೆ ಅವಕಾಶ: ಪ್ರಧಾನಿ ಮೋದಿ</a></p>.<p>* ದೇಶದ ಎಲ್ಲ ಜನರಿಗೆ ಕೇಂದ್ರಸರ್ಕಾರವೇ ಉಚಿತವಾಗಿ ಲಸಿಕೆಯನ್ನು ನೀಡಲಿದೆ</p>.<p>*ಉಚಿತ ಲಸಿಕೆ ಬೇಡ ಎಂದುಕೊಂಡವರಿಗೆ, ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವ ಸಾಮರ್ಥ್ಯ ಇರುವವರಿಗಾಗಿ ಅಂಥವರಿಗಾಗಿಯೇ ಖಾಸಗಿ ಆಸ್ಪತ್ರೆಗಳಿಗೂ ಶೇ.25 ಲಸಿಕೆಗಳನ್ನು ಒದಗಿಸಲಾಗುತ್ತದೆ.</p>.<p><strong>ಓದಿ:</strong><a href="https://www.prajavani.net/india-news/pm-narendra-modi-address-the-nation-covid-19-crisis-and-other-important-developments-836761.html" itemprop="url">LIVE | 80 ಕೋಟಿ ಮಂದಿಗೆ ಉಚಿತ ಪಡಿತರ ಯೋಜನೆ ಮುಂದುವರಿಕೆ: ಪ್ರಧಾನಿ ಮೋದಿ ಘೋಷಣೆ</a></p>.<p>*ಅವರು ಗರಿಷ್ಠ 150 ರೂ. ಸೇವಾ ಶುಲ್ಕ ತೆಗೆದುಕೊಂಡು, ಲಸಿಕೆಯನ್ನು ನೀಡಬಹುದು.</p>.<p>*ಹಿಂದಿನ ವರ್ಷ ಕೊರೊನಾ ಕಾರಣದಿಂದ ಲಾಕ್ಡೌನ್ ಮಾಡಲಾಗಿತ್ತು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಮಂದಿಗೆ ಉಚಿರ ರೇಷನ್ ಒದಗಿಸಲಾಗಿತ್ತು.</p>.<p>*ಈ ವರ್ಷವೂ ಮೇ ಹಾಗೂ ಜೂನ್ ತಿಂಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ.</p>.<p>*ಈ ಯೋಜನೆಯು ದೀಪಾವಳಿವರೆಗೂ ಮುಂದುವರಿಯಲಿದೆ.</p>.<p>*ಪ್ರತಿಯೊಬ್ಬ ಬಡ ನಾಗರಿಕರ ಜತೆಗೆ ಸರ್ಕಾರವೂ ಇದೆ. ನವೆಂಬರ್ವರೆಗೆ ಎಲ್ಲ 80 ಕೋಟಿ ಮಂದಿಗೆ, ಉಚಿತವಾಗಿ ಧಾನ್ಯ ವಿತರಿಸಲಾಗುತ್ತದೆ.</p>.<p>*<strong>ವಿಶ್ವಾಸೇನ ಸಿದ್ಧಿ: </strong>ವಿಶ್ವಾಸದಿಂದಲೇ ಸಿದ್ಧಿ ಎಂಬ ಭಾರತದ ಮೂಲಮಂತ್ರಕ್ಕೆ ಪೂರಕವಾಗಿ, 23 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ. ಭಾರತದಂತಹಾ ವಿಶಾಲ ದೇಶದಲ್ಲಿ ಇದೊಂದು ಬಲು ದೊಡ್ಡ ಸಾಧನೆ.</p>.<p>*ಭಾರತದಲ್ಲಿ ಲಸಿಕೆ ತಯಾರಿಸುವ ಕಂಪನಿಗಳಿಗೆ ಎಲ್ಲ ರೀತಿಯಲ್ಲೂ ಸರ್ಕಾರವು ನೆರವು ನೀಡಿ, ಭುಜಕ್ಕೆ ಭುಜ ಕೊಟ್ಟು ಗಟ್ಟಿಯಾಗಿ ನಿಂತಿದೆ.</p>.<p>*ಇಂದು, ದೇಶಗಳಲ್ಲಿ 7 ಕಂಪನಿಗಳು ವಿಭಿನ್ನ ರೀತಿಯ ಲಸಿಕೆಗಳನ್ನು ಉತ್ಪಾದಿಸಲು ಆರಂಭಿಸಿವೆ.</p>.<p>*ಬೇರೆ ದೇಶಗಳಿಂದಲೂ ಲಸಿಕೆ ಖರೀದಿ ಪ್ರಕ್ರಿಯೆಗಳಿಗೆ ವೇಗ ನೀಡಲಾಗಿದೆ.</p>.<p>*ಮೂಗಿನ ಮೂಲಕಸಿಂಪಡಿಸಲಾಗುವ ಲಸಿಕೆಯ ಪ್ರಯೋಗವೂ ನಡೆಯುತ್ತಿದೆ.</p>.<p>*ಇದಕ್ಕೆ ಯಶಸ್ಸು ಸಿಕ್ಕಿದರೆ, ಭಾರತದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ಸಿಗುತ್ತದೆ.</p>.<p>*ಇಷ್ಟು ಕಡಿಮೆ ಸಮಯದಲ್ಲಿ ಲಸಿಕೆ ತಯಾರಿಸುವುದು ಇಡೀ ಮಾನವ ಕುಲಕ್ಕೆ ಬಲು ದೊಡ್ಡ ಉಪಯೋಗ.</p>.<p>*ಇದೀಗ ಮೂರನೇ ಅಲೆಯ ಆತಂಕವಿರುವುದರಿಂದಾಗಿ, ಮಕ್ಕಳಿಗಾಗಿ ಎರಡು ಲಸಿಕೆಗಳ ಪ್ರಯೋಗವೂ ವೇಗವಾಗಿ ನಡೆಯುತ್ತಿದೆ.</p>.<p>*ಭಾರತದಲ್ಲಿ ಲಸಿಕೆ ಬಗ್ಗೆ ಕಾರ್ಯಕ್ರಮ ಆರಂಭವಾದಂದಿನಿಂದಲೇ ಕೆಲವು ಮಂದಿ ಜನ ಸಾಮಾನ್ಯರ ಮನಸ್ಸಿನಲ್ಲಿ ಶಂಕೆಯ ಬೀಜ ಬಿತ್ತುವ ಕೆಲಸ ಮಾಡಿದರು.</p>.<p>*ಭಾರತದ ಲಸಿಕೆ ಬಂದಾಗ, ಅದರ ಬಗ್ಗೆ ಶಂಕೆ ಮತ್ತಷ್ಟು ಹೆಚ್ಚುವಂತೆ ಮಾಡಲಾಯಿತು.</p>.<p>*ಇದನ್ನೆಲ್ಲಾ ದೇಶವೇ ನೋಡುತ್ತಿದೆ.</p>.<p>*ಲಸಿಕೆ ಬಗ್ಗೆ ಶಂಕೆ ಹುಟ್ಟಿಸಿಹಾಕಿದವರು ಅವರು ಮುಗ್ಧ ಜನರ ಜೀವನದ ಜೊತೆ ಚೆಲ್ಲಾಟವಾಡಿದರು. ಅಂಥವರಿಂದ ದೂರವಿರಿ.</p>.<p>*ಸಮಾಜದ ಪ್ರಬುದ್ಧ, ಯುವ ಜನರಲ್ಲಿ ಮನವಿ ಏನೆಂದರೆ, ಲಸಿಕೆ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರ ನೀಡಿ.</p>.<p>*ಕೆಲವು ಕಡೆಗಳಲ್ಲಿ ಕೊರೊನಾ ಕರ್ಫ್ಯೂ ಸಡಿಲಿಸಲಾಗುತ್ತಿದೆ. ಆದರೆ, ಕೊರೊನಾ ಓಡಿ ಹೋಗಿದೆ ಎಂದು ತಿಳಿಯಬೇಕಿಲ್ಲ. ಎಚ್ಚರಿಕೆ ವಹಿಸಲೇಬೇಕು.</p>.<p>*ನಾವೆಲ್ಲರೂ ಕೊರೊನಾ ವಿರುದ್ಧದ ಈ ಯುದ್ಧವನ್ನು ಜಯಿಸುತ್ತೇವೆ, ಭಾರತವು ಕೊರೊನಾ ವಿರುದ್ಧ ಜಯಿಸುತ್ತದೆ. ಎಲ್ಲರಿಗೂ ಶುಭವಾಗಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>