ಮುಖ್ಯಮಂತ್ರಿ ಗೆಹಲೋತ್ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಒಲವು ತೋರಿದ್ದರು. ಹೀಗಾಗಿ ಹೊಸ ಮುಖ್ಯಮಂತ್ರಿಯ ಆಯ್ಕೆ ಕುರಿತು ಚರ್ಚಿಸಲು ಸೆಪ್ಟೆಂಬರ್ನಲ್ಲಿ ಶಾಸಕಾಂಗ ಪಕ್ಷದ ಸಭೆ (ಸಿಎಲ್ಪಿ) ಹಮ್ಮಿಕೊಳ್ಳಲಾಗಿತ್ತು. ಗೆಹಲೋತ್ ಅವರ ನಿಷ್ಠರು ಈ ಸಭೆಯನ್ನು ಬಹಿಷ್ಕರಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಎಐಸಿಸಿ, ರಾಜಸ್ಥಾನದ ಮೂವರು ಹಿರಿಯ ನಾಯಕರಿಗೆ ನೋಟಿಸ್ ನೀಡಿತ್ತು.