ಬೇಳೆಕಾಳುಗಳು, ತರಕಾರಿಗಳು, ಹಣ್ಣುಗಳು ಮತ್ತು ಮೀನುಗಳನ್ನು ಸಂಸ್ಕರಿಸುವ ವ್ಯವಸ್ಥೆಯ ಅಗತ್ಯವಿದೆ. ರೈತರಿಗೆ ಅವರ ಹಳ್ಳಿಗಳ ಸಮೀಪವೇ ಈ ಸವಲತ್ತು ದೊರೆಯುವಂತೆ ಆಗಬೇಕು. ಈ ಮೂಲಕ ಈ ಉತ್ಪನ್ನಗಳ ಮೌಲ್ಯವರ್ಧನೆ ಮಾಡಬೇಕು. ಇದರಿಂದ ಗ್ರಾಮೀಣ ಪ್ರದೇಶದ ಯುವಕರಿಗೆ ಹಳ್ಳಿಗಳಲ್ಲೇ ಉದ್ಯೋಗ ದೊರೆಯುತ್ತದೆ. ಈ ಕೆಲಸಗಳು 30-40 ವರ್ಷಗಳ ಹಿಂದೆಯೇ ಆಗಿದ್ದರೆ, ಇಂದು ಇಂತಹ ಸ್ಥಿತಿ ಇರುತ್ತಿರಲಿಲ್ಲ’ ಎಂದು ಅವರು ಹೇಳಿದ್ದಾರೆ.