ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಪ್ಪುಗಳನ್ನು ಒಪ್ಪಿಕೊಂಡು, ತಜ್ಞರ ಸಹಾಯವನ್ನು ಪಡೆಯಬೇಕು. ಹಾಗಿದ್ದಲ್ಲಿ ಮಾತ್ರ ಭಾರತವನ್ನು ಕಟ್ಟಲು ಸಾಧ್ಯ. ತಮ್ಮ ತಪ್ಪುಗಳನ್ನು ನಿರಾಕರಿಸುವುದರಿಂದ ಏನೂ ಪರಿಹಾರ ಸಿಗುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.