ಇತ್ತೀಚೆಗೆ ಕಾರವಾರ ಸಮೀಪದ ಅಂಕೋಲ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಚಿವರಿಗೆ ಸೋಮವಾರ ಇಲ್ಲಿನ ಜಿಎಂಸಿಎಚ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿರುವುದಾಗಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದರು. ಇತ್ತೀಚೆಗಷ್ಟೇ ನವದೆಹಲಿಯ ಏಮ್ಸ್ ವೈದ್ಯರ ತಂಡ, ಗೋವಾ ಆಸ್ಪತ್ರೆಗೆ ಭೇಟಿ ನೀಡಿ, ನಾಯಕ್ ಅವರ ಆರೋಗ್ಯವನ್ನು ಪರಿಶೀಲಿಸಿತ್ತು.