<p><strong>ನವದೆಹಲಿ: </strong>ಕೊರೊನಾ ವೈರಸ್ನ ರೂಪಾಂತರಿ ಓಮೈಕ್ರಾನ್ ತಳಿಯ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರು, ಕೋವಿಡ್ ಪಿಡುಗಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಗುರುವಾರ ಹೇಳಿದರು.</p>.<p>ದೇಶದಲ್ಲಿನ ಕೋವಿಡ್–19 ಪಿಡುಗಿನ ಸ್ಥಿತಿ ಪರಿಶೀಲಿಸಲು ಹಾಗೂ ಓಮೈಕ್ರಾನ್ ತಳಿಯ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಡೆಸಿದ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕೋವಿಡ್ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ. ಹೆಚ್ಚು ಪ್ರಕರಣಗಳು ವರದಿಯಾಗಿರುವ ಹಾಗೂ ಲಸಿಕೆ ನೀಡಿಕೆ ಪ್ರಮಾಣ ಕಡಿಮೆ ಇರುವ ರಾಜ್ಯಗಳಿಗೆ ತಜ್ಞರ ತಂಡಗಳನ್ನು ಕಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಓಮೈಕ್ರಾನ್ ತಳಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ನಾವು ಹೆಚ್ಚು ಜಾಗೃತರಾಗಬೇಕು ಹಾಗೂ ಎಚ್ಚರದಿಂದ ಇರಬೇಕು’ ಎಂದೂ ಅವರು ಹೇಳಿದರು.</p>.<p>ಔಷಧಗಳ ಲಭ್ಯತೆ, ಆಮ್ಲಜನಕ ಸಿಲಿಂಡರ್ಗಳು, ವೆಂಟಿಲೇಟರ್ಗಳ ದಾಸ್ತಾನು, ಮಾನವ ಸಂಪನ್ಮೂಲ, ಹಾಸಿಗೆಗಳು ಸೇರಿದಂತೆ ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಪ್ರಧಾನಿ ಸೂಚಿಸಿದರು ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೊರೊನಾ ವೈರಸ್ನ ರೂಪಾಂತರಿ ಓಮೈಕ್ರಾನ್ ತಳಿಯ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರು, ಕೋವಿಡ್ ಪಿಡುಗಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಗುರುವಾರ ಹೇಳಿದರು.</p>.<p>ದೇಶದಲ್ಲಿನ ಕೋವಿಡ್–19 ಪಿಡುಗಿನ ಸ್ಥಿತಿ ಪರಿಶೀಲಿಸಲು ಹಾಗೂ ಓಮೈಕ್ರಾನ್ ತಳಿಯ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಡೆಸಿದ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕೋವಿಡ್ ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ. ಹೆಚ್ಚು ಪ್ರಕರಣಗಳು ವರದಿಯಾಗಿರುವ ಹಾಗೂ ಲಸಿಕೆ ನೀಡಿಕೆ ಪ್ರಮಾಣ ಕಡಿಮೆ ಇರುವ ರಾಜ್ಯಗಳಿಗೆ ತಜ್ಞರ ತಂಡಗಳನ್ನು ಕಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಓಮೈಕ್ರಾನ್ ತಳಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ನಾವು ಹೆಚ್ಚು ಜಾಗೃತರಾಗಬೇಕು ಹಾಗೂ ಎಚ್ಚರದಿಂದ ಇರಬೇಕು’ ಎಂದೂ ಅವರು ಹೇಳಿದರು.</p>.<p>ಔಷಧಗಳ ಲಭ್ಯತೆ, ಆಮ್ಲಜನಕ ಸಿಲಿಂಡರ್ಗಳು, ವೆಂಟಿಲೇಟರ್ಗಳ ದಾಸ್ತಾನು, ಮಾನವ ಸಂಪನ್ಮೂಲ, ಹಾಸಿಗೆಗಳು ಸೇರಿದಂತೆ ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಪ್ರಧಾನಿ ಸೂಚಿಸಿದರು ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>