ಏಪ್ರಿಲ್-ಮೇ ತಿಂಗಳಲ್ಲಿ ಕೋವಿಡ್–19 ಎರಡನೇ ಅಲೆ ತೀವ್ರವಾದಾಗ, ದೇಶದ ವಿವಿಧ ಭಾಗಗಳಲ್ಲಿರುವ ಆಸ್ಪತ್ರೆಗಳಲ್ಲಿವೈದ್ಯಕೀಯ ಆಮ್ಲಜನಕದ ಕೊರತೆ ಇರುವುದಾಗಿ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿದೆ.