ನವದೆಹಲಿ: ಭಾರತವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ’ ಕುರಿತು (ಆಜಾದಿ ಕಾ ಅಮೃತಮಹೋತ್ಸವ) ಹೇಳಿಕೆ ನೀಡಲು ಬಯಸಿದ್ದರು. ಆದರೆ, ಸದನದಲ್ಲಿನ ಗದ್ದಲದಿಂದಾಗಿ ಸಾಧ್ಯವಾಗಲಿಲ್ಲ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.