<p><strong>ನವದೆಹಲಿ</strong>:‘ಅತ್ಯಾಚಾರಕ್ಕೊಳಗಾಗಿರುವ ಅಪ್ರಾಪ್ತೆಯು ನ್ಯಾಯಾಲಯದ ವಿಚಾರಣೆ ವೇಳೆ ಹಾಜರಿರುವ ಮೂಲಕ ಮಾನಸಿಕ ವೇದನೆ ಅನುಭವಿಸಿರುತ್ತಾಳೆ. ಆಕೆಗೆ ಇಷ್ಟವಿಲ್ಲದಿದ್ದರೆ ವಿಚಾರಣೆ ನೆಪದಲ್ಲಿ ಅತ್ಯಾಚಾರದ ಘಟನೆಯನ್ನು ಮತ್ತೆ ನೆನಪಿಸಬಾರದು. ಆ ಮೂಲಕ ಆಕೆಯ ಮನಸ್ಸನ್ನು ಘಾಸಿಗೊಳಿಸಬಾರದು’ ಎಂದು ದೆಹಲಿ ಹೈಕೋರ್ಟ್ ಗುರುವಾರ ಹೇಳಿದೆ.</p>.<p>ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಹೀಗೆ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಸಂತ್ರಸ್ತೆಯನ್ನು ಅಪರಾಧಿಯ ಎದುರು ನಿಲ್ಲಿಸಿಕೊಂಡೇ ಆರೋಪ–ಪ್ರತ್ಯಾರೋಪಗಳನ್ನು ಮಾಡುವುದು, ಆಕೆಯ ಪ್ರಾಮಾಣಿಕತೆ ಹಾಗೂ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ. ಇದರಿಂದ ಆಕೆಯ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ’ ಎಂದು ಜಸ್ಮೀತ್ ಸಿಂಗ್ ಅವರು ಆಗಸ್ಟ್ 1ರ ತೀರ್ಪಿನಲ್ಲಿ ಹೇಳಿದ್ದಾರೆ.</p>.<p>‘ಪತ್ನಿ ಹಾಗೂ ಸಂತ್ರಸ್ತೆ ರಾಜಸ್ಥಾನದಲ್ಲಿ ನೆಲೆಸಿದ್ದು, ಅಲ್ಲಿಗೆ ಯಾವುದೇ ಕಾರಣಕ್ಕೂ ಭೇಟಿ ನೀಡಬಾರದು. ಕರೆದಾಗ ಮತ್ತೆ ವಿಚಾರಣೆಗೆ ಹಾಜರಾಗಬೇಕು’ ಎಂಬ ಷರತ್ತುಗಳೊಂದಿಗೆ ಅರ್ಜಿದಾರರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:‘ಅತ್ಯಾಚಾರಕ್ಕೊಳಗಾಗಿರುವ ಅಪ್ರಾಪ್ತೆಯು ನ್ಯಾಯಾಲಯದ ವಿಚಾರಣೆ ವೇಳೆ ಹಾಜರಿರುವ ಮೂಲಕ ಮಾನಸಿಕ ವೇದನೆ ಅನುಭವಿಸಿರುತ್ತಾಳೆ. ಆಕೆಗೆ ಇಷ್ಟವಿಲ್ಲದಿದ್ದರೆ ವಿಚಾರಣೆ ನೆಪದಲ್ಲಿ ಅತ್ಯಾಚಾರದ ಘಟನೆಯನ್ನು ಮತ್ತೆ ನೆನಪಿಸಬಾರದು. ಆ ಮೂಲಕ ಆಕೆಯ ಮನಸ್ಸನ್ನು ಘಾಸಿಗೊಳಿಸಬಾರದು’ ಎಂದು ದೆಹಲಿ ಹೈಕೋರ್ಟ್ ಗುರುವಾರ ಹೇಳಿದೆ.</p>.<p>ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಹೀಗೆ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಸಂತ್ರಸ್ತೆಯನ್ನು ಅಪರಾಧಿಯ ಎದುರು ನಿಲ್ಲಿಸಿಕೊಂಡೇ ಆರೋಪ–ಪ್ರತ್ಯಾರೋಪಗಳನ್ನು ಮಾಡುವುದು, ಆಕೆಯ ಪ್ರಾಮಾಣಿಕತೆ ಹಾಗೂ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ. ಇದರಿಂದ ಆಕೆಯ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ’ ಎಂದು ಜಸ್ಮೀತ್ ಸಿಂಗ್ ಅವರು ಆಗಸ್ಟ್ 1ರ ತೀರ್ಪಿನಲ್ಲಿ ಹೇಳಿದ್ದಾರೆ.</p>.<p>‘ಪತ್ನಿ ಹಾಗೂ ಸಂತ್ರಸ್ತೆ ರಾಜಸ್ಥಾನದಲ್ಲಿ ನೆಲೆಸಿದ್ದು, ಅಲ್ಲಿಗೆ ಯಾವುದೇ ಕಾರಣಕ್ಕೂ ಭೇಟಿ ನೀಡಬಾರದು. ಕರೆದಾಗ ಮತ್ತೆ ವಿಚಾರಣೆಗೆ ಹಾಜರಾಗಬೇಕು’ ಎಂಬ ಷರತ್ತುಗಳೊಂದಿಗೆ ಅರ್ಜಿದಾರರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>