ಭಾನುವಾರ ಸಂಜೆ ಪಟ್ನಾ ಜಿಲ್ಲೆಯ ಗೌರಿಚೌಕ್ ಪೊಲೀಸ್ ಠಾಣೆಯ ವ್ಯಾಪ್ತಿಯ ಸೊಗಾಹಿ ಹಳ್ಳಿಯಲ್ಲಿ ದುಷ್ಕರ್ಮಿಗಳು ಮುಖ್ಯಮಂತ್ರಿಗಳ ಬೆಂಗಾವಲು ಪಡೆ ವಾಹನದ ಮೇಲೆ ಮನಸೋಇಚ್ಚೆ ಕಲ್ಲು ತೂರಾಟ ನಡೆಸಿ, ಬಡಿಗೆಗಳಿಂದ ಕಾರುಗಳನ್ನು ಪುಡಿ ಪುಡಿ ಮಾಡಿದ್ದರು. ಈ ವೇಳೆ ಬೆಂಗಾವಲು ಪಡೆಯ ಜೊತೆ ಸಿಎಂ ನಿತೀಶ್ ಕುಮಾರ್ ಇರಲಿಲ್ಲ.