‘ಪ್ರತಿಭಟನಕಾರರು ನಗರದ ಮಧ್ಯಭಾಗದ ಪ್ರದೇಶವನ್ನು ಬಂದ್ ಮಾಡಿದ್ದರು. ಜವಾಹರಲಾಲ್ ನೆಹರೂ ರಸ್ತೆಯನ್ನು ತೆರವುಗೊಳಿಸುವಂತೆ ಪೊಲೀಸರು ಪ್ರತಿಭಟನಕಾರರಿಗೆ ಮನವಿ ಮಾಡಿದರು. ಆದರೆ, ಪ್ರತಿಭಟನಕಾರರು ರಸ್ತೆ ತೆರವುಗೊಳಿಸಲು ನಿರಾಕರಿಸಿದರಲ್ಲದೇ, ಐಎಸ್ಎಫ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಸಿಡಿಸಿದರು. ಸುಮಾರು 500ರಷ್ಟು ಸಂಖ್ಯೆಯಲ್ಲಿದ್ದ ಪ್ರತಿಭಟನಕಾರರು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದಾಗ, ಹಲವಾರು ಪೊಲೀಸರು ಗಾಯಗೊಂಡರು’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.