<p><strong>ನವದೆಹಲಿ: </strong>ಟ್ರ್ಯಾಕ್ಟರ್ ರ್ಯಾಲಿಯ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ವಿರುದ್ಧ ದೇಶದ್ರೋಹಕ್ಕೆ ಸಂಬಂಧಿಸಿದ ಪ್ರಕರಣವನ್ನು ದಾಖಲಿಸಿದ್ದಾರೆ.</p>.<p>ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಭಾರತೀಯ ದಂಡಸಂಹಿತೆ 124ಎ (ದೇಶದ್ರೋಹ) ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ. ಇದಕ್ಕೂ ಮೊದಲು ಪೊಲೀಸರು ನಟ ದೀಪ್ ಸಿಧು ಮತ್ತು ಗ್ಯಾಂಗ್ಸ್ಟರ್ ಲಖಾ ಸಿಧಾನಾ ವಿರುದ್ಧ ಕೆಂಪುಕೋಟೆ ಬಳಿ ನಡೆದಿದ್ದ ದಾಂದಲೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದ್ದರು.</p>.<p>ಗಾಜಿಪುರ್ ಗಡಿ ಭಾಗದಿಂದ ಐಟಿಒವರೆಗೂ ಮಂಗಳವಾರ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಧಾವಿಸಿದ್ದ ಸಾವಿರಾರು ರೈತರು ಪೊಲೀಸರ ಜೊತೆಗೆ ಘರ್ಷಣೆಗೆ ಇಳಿದಿದ್ದರು. ಅಲ್ಲದೆ, ಕೆಂಪುಕೋಟೆಯನ್ನು ಪ್ರವೇಶಿಸಿದ್ದರು.</p>.<p>ದಾಂದಲೆ ನಡೆಸಿದ್ದ ರೈತರು ಕೆಂಪುಕೋಟೆಯ ಗೋಪುರದ ಮೇಲೆ ಧ್ವಜ ಹಾರಿಸಿದ್ದರು.</p>.<p>ಈ ಮಧ್ಯೆ ಕೆಂಪುಕೋಟೆಗೆ ಇದೇ 31ರವರೆಗೆ ಜನರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತ ಆದೇಶದಲ್ಲಿ ಕಾರಣದ ಉಲ್ಲೇಖವಿಲ್ಲ. ಆದರೆ, ಹಕ್ಕಿಜ್ವರ ಕುರಿತು ಹಿಂದೆ ಹೊರಡಿಸಿದ್ದ ಆದೇಶವನ್ನು ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಟ್ರ್ಯಾಕ್ಟರ್ ರ್ಯಾಲಿಯ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ವಿರುದ್ಧ ದೇಶದ್ರೋಹಕ್ಕೆ ಸಂಬಂಧಿಸಿದ ಪ್ರಕರಣವನ್ನು ದಾಖಲಿಸಿದ್ದಾರೆ.</p>.<p>ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಭಾರತೀಯ ದಂಡಸಂಹಿತೆ 124ಎ (ದೇಶದ್ರೋಹ) ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ. ಇದಕ್ಕೂ ಮೊದಲು ಪೊಲೀಸರು ನಟ ದೀಪ್ ಸಿಧು ಮತ್ತು ಗ್ಯಾಂಗ್ಸ್ಟರ್ ಲಖಾ ಸಿಧಾನಾ ವಿರುದ್ಧ ಕೆಂಪುಕೋಟೆ ಬಳಿ ನಡೆದಿದ್ದ ದಾಂದಲೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದ್ದರು.</p>.<p>ಗಾಜಿಪುರ್ ಗಡಿ ಭಾಗದಿಂದ ಐಟಿಒವರೆಗೂ ಮಂಗಳವಾರ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಧಾವಿಸಿದ್ದ ಸಾವಿರಾರು ರೈತರು ಪೊಲೀಸರ ಜೊತೆಗೆ ಘರ್ಷಣೆಗೆ ಇಳಿದಿದ್ದರು. ಅಲ್ಲದೆ, ಕೆಂಪುಕೋಟೆಯನ್ನು ಪ್ರವೇಶಿಸಿದ್ದರು.</p>.<p>ದಾಂದಲೆ ನಡೆಸಿದ್ದ ರೈತರು ಕೆಂಪುಕೋಟೆಯ ಗೋಪುರದ ಮೇಲೆ ಧ್ವಜ ಹಾರಿಸಿದ್ದರು.</p>.<p>ಈ ಮಧ್ಯೆ ಕೆಂಪುಕೋಟೆಗೆ ಇದೇ 31ರವರೆಗೆ ಜನರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತ ಆದೇಶದಲ್ಲಿ ಕಾರಣದ ಉಲ್ಲೇಖವಿಲ್ಲ. ಆದರೆ, ಹಕ್ಕಿಜ್ವರ ಕುರಿತು ಹಿಂದೆ ಹೊರಡಿಸಿದ್ದ ಆದೇಶವನ್ನು ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>