ವಿಧಾನಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಿದ ಅವರು, ‘ರಾಜ್ಯ ಸರ್ಕಾರವು ಹಿರಾನಿ ಅವರ ಸಾವಿನ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಪೊಲೀಸ್ ಅಧಿಕಾರಿ ಸಚಿನ್ ಅವರನ್ನು ಅಪರಾಧ ದಳದಿಂದ ಹೊರಗಿಡಲಾಗುವುದು. ವಿರೋಧ ಪಕ್ಷದವರ ಬೇಡಿಕೆಯ ಮೇರೆಗೆ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ’ ಎಂದರು