<p>ಮುಂಬೈ: ಸರ್ಕಾರಿ ಗೋಪ್ಯ ಕಾಯ್ದೆಯಡಿ (ಒಎಸ್ಎ) ಪೊಲೀಸ್ ಠಾಣೆಯನ್ನು ನಿಷೇಧಿತ ಸ್ಥಳ ಎಂದು ಗುರುತಿಸಿಲ್ಲ. ಹೀಗಾಗಿ ಪೊಲೀಸ್ ಠಾಣೆಯೊಳಗೆ ವಿಡಿಯೊ ಚಿತ್ರೀಕರಣ ಮಾಡುವುದು ಅಪರಾಧ ಆಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ ತಿಳಿಸಿದೆ.</p>.<p>ವಾರ್ಧಾಪೊಲೀಸ್ ಠಾಣೆಯೊಳಗೆ ಮಾರ್ಚ್ 2018ರಂದು ವಿಡಿಯೊ ಚಿತ್ರೀಕರಣ ಮಾಡುವುದರ ಮೂಲಕ ರವೀಂದ್ರ ಉಪಾಧ್ಯಾಯ ಎಂಬುವರು ಒಎಸ್ಎ ಕಾಯ್ದೆ ಉಲ್ಲಂಘಿಸಿದ್ದಾರೆಎಂಬ ಆರೋಪದ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಮನಿಷ್ ಪಿತಾಳೆ ಮತ್ತು ವಾಲ್ಮಿಕಿ ಮೆನೇಜಸ್ ಅವರ ವಿಭಾಗೀಯ ಪೀಠ ಇತ್ತೀಚೆಗೆ ರದ್ದುಗೊಳಿಸಿದೆ.</p>.<p>ಒಎಸ್ಎಯ ಸೆಕ್ಷನ್ 3 ಮತ್ತು 2 (8)ರಲ್ಲಿ ಬೇಹುಗಾರಿಕೆಗೆ ಸಂಬಂಧಿಸಿದ ನಿಷೇಧಿತ ಸ್ಥಳಗಳಲ್ಲಿ ಪೊಲೀಸ್ ಠಾಣೆಯನ್ನು ಉಲ್ಲೇಖಿಸಿಲ್ಲ ಎಂದಿರುವ ಹೈಕೋರ್ಟ್, ಅದನ್ನು ‘ನಿಷೇಧಿತ ಸ್ಥಳ’ ಎಂಬ ವ್ಯಾಖ್ಯಾನದಲ್ಲಿ ಸೇರಿಸಬಹುದು ಎಂದು ಆದೇಶದಲ್ಲಿ ಹೇಳಿದೆ.</p>.<p>ನೆರೆ ಹೊರೆಯವರೊಂದಿಗೆಜಗಳಕ್ಕೆ ಸಂಬಂಧಿಸಿ ಉಪಾಧ್ಯಾಯ ಅವರು ತನ್ನ ಪತ್ನಿಯೊಂದಿಗೆ ವಾರ್ಧಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೇ ವೇಳೆ ಅವರ ವಿರುದ್ಧವೂ ಪ್ರತಿ ದೂರು ದಾಖಲಾಯಿತು. ಈ ಸಂದರ್ಭದಲ್ಲಿ ಠಾಣೆಯಲ್ಲಿ ನಡೆಯುತ್ತಿದ್ದ ಚರ್ಚೆಯನ್ನು ಉಪಾಧ್ಯಾಯ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಅವರ ವಿರುದ್ಧಒಎಸ್ಎ ಕಾಯ್ದೆ ಉಲ್ಲಂಘನೆಯಡಿ ಎಫ್ಐಆರ್ ದಾಖಲಿಸಿ, ಆರೋಪಪಟ್ಟಿ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ: ಸರ್ಕಾರಿ ಗೋಪ್ಯ ಕಾಯ್ದೆಯಡಿ (ಒಎಸ್ಎ) ಪೊಲೀಸ್ ಠಾಣೆಯನ್ನು ನಿಷೇಧಿತ ಸ್ಥಳ ಎಂದು ಗುರುತಿಸಿಲ್ಲ. ಹೀಗಾಗಿ ಪೊಲೀಸ್ ಠಾಣೆಯೊಳಗೆ ವಿಡಿಯೊ ಚಿತ್ರೀಕರಣ ಮಾಡುವುದು ಅಪರಾಧ ಆಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ ತಿಳಿಸಿದೆ.</p>.<p>ವಾರ್ಧಾಪೊಲೀಸ್ ಠಾಣೆಯೊಳಗೆ ಮಾರ್ಚ್ 2018ರಂದು ವಿಡಿಯೊ ಚಿತ್ರೀಕರಣ ಮಾಡುವುದರ ಮೂಲಕ ರವೀಂದ್ರ ಉಪಾಧ್ಯಾಯ ಎಂಬುವರು ಒಎಸ್ಎ ಕಾಯ್ದೆ ಉಲ್ಲಂಘಿಸಿದ್ದಾರೆಎಂಬ ಆರೋಪದ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಮನಿಷ್ ಪಿತಾಳೆ ಮತ್ತು ವಾಲ್ಮಿಕಿ ಮೆನೇಜಸ್ ಅವರ ವಿಭಾಗೀಯ ಪೀಠ ಇತ್ತೀಚೆಗೆ ರದ್ದುಗೊಳಿಸಿದೆ.</p>.<p>ಒಎಸ್ಎಯ ಸೆಕ್ಷನ್ 3 ಮತ್ತು 2 (8)ರಲ್ಲಿ ಬೇಹುಗಾರಿಕೆಗೆ ಸಂಬಂಧಿಸಿದ ನಿಷೇಧಿತ ಸ್ಥಳಗಳಲ್ಲಿ ಪೊಲೀಸ್ ಠಾಣೆಯನ್ನು ಉಲ್ಲೇಖಿಸಿಲ್ಲ ಎಂದಿರುವ ಹೈಕೋರ್ಟ್, ಅದನ್ನು ‘ನಿಷೇಧಿತ ಸ್ಥಳ’ ಎಂಬ ವ್ಯಾಖ್ಯಾನದಲ್ಲಿ ಸೇರಿಸಬಹುದು ಎಂದು ಆದೇಶದಲ್ಲಿ ಹೇಳಿದೆ.</p>.<p>ನೆರೆ ಹೊರೆಯವರೊಂದಿಗೆಜಗಳಕ್ಕೆ ಸಂಬಂಧಿಸಿ ಉಪಾಧ್ಯಾಯ ಅವರು ತನ್ನ ಪತ್ನಿಯೊಂದಿಗೆ ವಾರ್ಧಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೇ ವೇಳೆ ಅವರ ವಿರುದ್ಧವೂ ಪ್ರತಿ ದೂರು ದಾಖಲಾಯಿತು. ಈ ಸಂದರ್ಭದಲ್ಲಿ ಠಾಣೆಯಲ್ಲಿ ನಡೆಯುತ್ತಿದ್ದ ಚರ್ಚೆಯನ್ನು ಉಪಾಧ್ಯಾಯ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಅವರ ವಿರುದ್ಧಒಎಸ್ಎ ಕಾಯ್ದೆ ಉಲ್ಲಂಘನೆಯಡಿ ಎಫ್ಐಆರ್ ದಾಖಲಿಸಿ, ಆರೋಪಪಟ್ಟಿ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>