ನೆರೆ ಹೊರೆಯವರೊಂದಿಗೆ ಜಗಳಕ್ಕೆ ಸಂಬಂಧಿಸಿ ಉಪಾಧ್ಯಾಯ ಅವರು ತನ್ನ ಪತ್ನಿಯೊಂದಿಗೆ ವಾರ್ಧಾಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೇ ವೇಳೆ ಅವರ ವಿರುದ್ಧವೂ ಪ್ರತಿ ದೂರು ದಾಖಲಾಯಿತು. ಈ ಸಂದರ್ಭದಲ್ಲಿ ಠಾಣೆಯಲ್ಲಿ ನಡೆಯುತ್ತಿದ್ದ ಚರ್ಚೆಯನ್ನು ಉಪಾಧ್ಯಾಯ ವಿಡಿಯೊ ಚಿತ್ರೀಕರಣ ಮಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಅವರ ವಿರುದ್ಧ ಒಎಸ್ಎ ಕಾಯ್ದೆ ಉಲ್ಲಂಘನೆಯಡಿ ಎಫ್ಐಆರ್ ದಾಖಲಿಸಿ, ಆರೋಪಪಟ್ಟಿ ಸಲ್ಲಿಸಿದ್ದರು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ.