ಈ ನಡುವೆ, ಮೃತ ರಾಹುಲ್ ಭಟ್ ಕುಟುಂಬಕ್ಕೆ ಸಾಂತ್ವನ ಹೇಳುವುದರಿಂದ ತಡೆಯಲು ನನಗೆ ಗೃಹಬಂಧನ ವಿಧಿಸಲಾಗಿದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಟ್ವೀಟ್ ಮೂಲಕ ದೂರಿದ್ದಾರೆ. ಕಾಶ್ಮೀರ ಪಂಡಿತರು ಮತ್ತು ಮುಸಲ್ಮಾನರು ಪರಸ್ಪರ ಸಾಂತ್ವನ ಹೇಳಲು ಬಿಜೆಪಿ ಬಿಡುತ್ತಿಲ್ಲ ಎಂದು ಅವರು ಕಿಡಿ ಕಾರಿದ್ದಾರೆ. ಆದರೆ, ಈ ಬಗ್ಗೆ ಪ್ರತಿಕ್ರಿಯೆಗೆ ಪೊಲೀಸರು ನಿರಾಕರಿಸಿದ್ದಾರೆ.