ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ ಸಚಿವರ ಹತ್ಯೆ ಆರೋಪಿಗೆ ಸುಳ್ಳುಪತ್ತೆ ಪರೀಕ್ಷೆ

Last Updated 10 ಫೆಬ್ರುವರಿ 2023, 19:17 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ಅವರನ್ನು ಗುಂಡಿಕ್ಕಿ ಕೊಂದ ಆರೋಪಿ ಪೊಲೀಸ್ ಅಧಿಕಾರಿ ಗೋಪಾಲ್ ದಾಸ್‌ನನ್ನು ಗುಜರಾತ್‌ನ ಗಾಂಧಿನಗರದಲ್ಲಿ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಮಂಪರು ಪರೀಕ್ಷೆಗೂ ಒಳಪಡಿಸಲಾಗುವುದು. ಜಿಲ್ಲಾ ನ್ಯಾಯಾಲಯದ ಅನುಮತಿ ಪಡೆದ ನಂತರ ಈ ಪರೀಕ್ಷೆಯನ್ನು ಗಾಂಧಿನಗರದ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ. ‌

ಮನೋವೈದ್ಯರನ್ನೊಳಗೊಂಡ ವೈದ್ಯಕೀಯ ಮಂಡಳಿಯು ಗೋಪಾಲ್ ಅವರ ಮಾನಸಿಕ ಆರೋಗ್ಯದ ಬಗ್ಗೆ ವಿಸ್ತೃತ ಅಧ್ಯಯನ ನಡೆಸಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT