ಈ ಘಟನೆ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಜಖಾನಿ ಚೌಕ್ ಚೆಕ್ಪೋಸ್ಟ್ನಲ್ಲಿ ಕಾನ್ಸ್ಟೆಬಲ್ಕಾಕಾ ರಾಮ್ ಮತ್ತು ವಿಶೇಷ ಪೊಲೀಸ್ ಅಧಿಕಾರಿ ಮನೋಹರ್ಲಾಲ್ ಅವರನ್ನು ನಿಯೋಜಿಸಲಾಗಿತ್ತು. ಯಾವುದೋ ವಿಷಯಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೋಪಗೊಂಡ ಮನೋಹರ್ ಲಾಲ್ ಸರ್ವಿಸ್ ರೈಫಲ್ನಿಂದ ರಾಮ್ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.