<p><strong>ನವದೆಹಲಿ:</strong> ‘ಈಗಾಗಲೇ ಕೋವಿಡ್ ಔಷಧಿಯ ಕೊರತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ನಾಯಕರು ಕೋವಿಡ್ ಔಷಧಿಗಳನ್ನು ಸಂಗ್ರಹಿಸಬಾರದು. ಆದಷ್ಟು ಬೇಗ ಅವುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂತಿರುಗಿಸಿ’ ಎಂದು ದೆಹಲಿ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.</p>.<p>‘ಇದು ಸಾರ್ವಜನಿಕರಿಗಾಗಿರುವ ಔಷಧಿ. ಇದನ್ನು ರಾಜಕೀಯಕ್ಕೆ ಬಳಸಬಾರದು. ಬಡ ಮತ್ತು ಅಗತ್ಯವಿರುವ ಜನರಿಗೆ ಉಪಯೋಗವಾಗುವಂತೆ ರಾಜಕೀಯ ನಾಯಕರು ತಮ್ಮ ಬಳಿ ದಾಸ್ತಾನು ಮಾಡಿರುವ ಕೋವಿಡ್ ಔಷಧಿಗಳನ್ನು ಆರೋಗ್ಯ ಸೇವೆಗಳ ಪ್ರಧಾನ ನಿರ್ದೇಶಕರು ಮತ್ತು ದೆಹಲಿ ಸರ್ಕಾರಕ್ಕೆ ಒಪ್ಪಿಸಬೇಕು’ ಎಂದು ಹೈಕೋರ್ಟ್ ತಿಳಿಸಿದೆ.</p>.<p>ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಪಿನ್ ಸಂಘಾಯಿ ಮತ್ತು ಜಸ್ಮೀತ್ ಸಿಂಗ್ ಅವರ ಪೀಠವು, ಪ್ರಕರಣ ಕುರಿತಾಗಿ ದೆಹಲಿ ಪೊಲೀಸರು ಸಲ್ಲಿಸಿರುವ ವರದಿ ಬಗ್ಗೆ ನಿರಾಶೆ ವ್ಯಕ್ತಪಡಿಸಿದೆ. ಅಲ್ಲದೆ ಈ ಬಗ್ಗೆ ಸರಿಯಾದ ತನಿಖೆ ನಡೆಸಿ, ಉತ್ತಮ ವರದಿ ಸಲ್ಲಿಸುವಂತೆ ಸೂಚಿಸಿದೆ.</p>.<p>ಕೋವಿಡ್ ರೋಗಿಗಳು ಔಷಧಿಯಿಲ್ಲದೆ ನರಳುತ್ತಿದ್ದಾರೆ. ಆದರೆ ದೆಹಲಿಯಲ್ಲಿ ರಾಜಕೀಯ ನಾಯಕರು ದೊಡ್ಡ ಪ್ರಮಾಣದಲ್ಲಿ ಔಷಧಿಯನ್ನು ಶೇಖರಣೆ ಮಾಡುತ್ತಿದ್ದಾರೆ ಮತ್ತು ವಿತರಣೆ ಮಾಡುತ್ತಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.</p>.<p>ಈ ಸಂಬಂಧ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಹೈಕೋರ್ಟ್, ದೆಹಲಿ ಪೊಲೀಸರಿಗೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಈಗಾಗಲೇ ಕೋವಿಡ್ ಔಷಧಿಯ ಕೊರತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ನಾಯಕರು ಕೋವಿಡ್ ಔಷಧಿಗಳನ್ನು ಸಂಗ್ರಹಿಸಬಾರದು. ಆದಷ್ಟು ಬೇಗ ಅವುಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂತಿರುಗಿಸಿ’ ಎಂದು ದೆಹಲಿ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.</p>.<p>‘ಇದು ಸಾರ್ವಜನಿಕರಿಗಾಗಿರುವ ಔಷಧಿ. ಇದನ್ನು ರಾಜಕೀಯಕ್ಕೆ ಬಳಸಬಾರದು. ಬಡ ಮತ್ತು ಅಗತ್ಯವಿರುವ ಜನರಿಗೆ ಉಪಯೋಗವಾಗುವಂತೆ ರಾಜಕೀಯ ನಾಯಕರು ತಮ್ಮ ಬಳಿ ದಾಸ್ತಾನು ಮಾಡಿರುವ ಕೋವಿಡ್ ಔಷಧಿಗಳನ್ನು ಆರೋಗ್ಯ ಸೇವೆಗಳ ಪ್ರಧಾನ ನಿರ್ದೇಶಕರು ಮತ್ತು ದೆಹಲಿ ಸರ್ಕಾರಕ್ಕೆ ಒಪ್ಪಿಸಬೇಕು’ ಎಂದು ಹೈಕೋರ್ಟ್ ತಿಳಿಸಿದೆ.</p>.<p>ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಪಿನ್ ಸಂಘಾಯಿ ಮತ್ತು ಜಸ್ಮೀತ್ ಸಿಂಗ್ ಅವರ ಪೀಠವು, ಪ್ರಕರಣ ಕುರಿತಾಗಿ ದೆಹಲಿ ಪೊಲೀಸರು ಸಲ್ಲಿಸಿರುವ ವರದಿ ಬಗ್ಗೆ ನಿರಾಶೆ ವ್ಯಕ್ತಪಡಿಸಿದೆ. ಅಲ್ಲದೆ ಈ ಬಗ್ಗೆ ಸರಿಯಾದ ತನಿಖೆ ನಡೆಸಿ, ಉತ್ತಮ ವರದಿ ಸಲ್ಲಿಸುವಂತೆ ಸೂಚಿಸಿದೆ.</p>.<p>ಕೋವಿಡ್ ರೋಗಿಗಳು ಔಷಧಿಯಿಲ್ಲದೆ ನರಳುತ್ತಿದ್ದಾರೆ. ಆದರೆ ದೆಹಲಿಯಲ್ಲಿ ರಾಜಕೀಯ ನಾಯಕರು ದೊಡ್ಡ ಪ್ರಮಾಣದಲ್ಲಿ ಔಷಧಿಯನ್ನು ಶೇಖರಣೆ ಮಾಡುತ್ತಿದ್ದಾರೆ ಮತ್ತು ವಿತರಣೆ ಮಾಡುತ್ತಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು.</p>.<p>ಈ ಸಂಬಂಧ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಹೈಕೋರ್ಟ್, ದೆಹಲಿ ಪೊಲೀಸರಿಗೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>