ನವದೆಹಲಿ: ಸಂಸದರು, ಸಚಿವರಿಗೆ ಕೋವಿಡ್ ದೃಢಪಡುತ್ತಿರುವ ಕಾರಣ ಈಗ ನಡೆಯುತ್ತಿರುವ ಸಂಸತ್ತಿನ ಮುಂಗಾರು ಅಧಿವೇಶನವನ್ನು ಮೊಟಕುಗೊಳಿಸುವಂತೆ ಮೂರು ಪಕ್ಷಗಳು ಆಗ್ರಹಿಸಿವೆ. ಡಿಎಂಕೆಯ ತಿರುಚ್ಚಿ ಶಿವಾ, ಎನ್ಸಿಪಿಯ ಪ್ರಫುಲ್ ಪಟೇಲ್ ಹಾಗೂ ತೃಣಮೂಲ ಕಾಂಗ್ರೆಸ್ನ ಡೆರೆಕ್ ಒಬ್ರಿಯಾನ್ ಅವರು ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ್ ಜೋಷಿ ಅವರಿಗೆ ಮನವಿ ಮಾಡಿದ್ದಾರೆ.