ಕೊಚ್ಚಿ: ದೇವಸ್ಥಾನದ ದೈನಂದಿನ ಪೂಜೆ ಮತ್ತು ಉತ್ಸವಗಳನ್ನು ನಡೆಸುವಲ್ಲಿ ರಾಜಕೀಯದ ಯಾವುದೇ ಪಾತ್ರವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕೇರಳ ಹೈಕೋರ್ಟ್, ಸಮಾರಂಭಗಳಲ್ಲಿ ಬಳಸುವ ಅಲಂಕಾರಿಕ ವಸ್ತುಗಳಿಗೆ ನಿರ್ದಿಷ್ಟ ಬಣ್ಣ ಬಳಸುವಂತೆ ಒತ್ತಾಯಿಸುವ ಕಾನೂನುಬದ್ಧ ಹಕ್ಕು ಭಕ್ತ ಅಥವಾ ಜಿಲ್ಲಾಡಳಿತಕ್ಕೆ ಇಲ್ಲ ಎಂದು ಹೇಳಿದೆ.