<p><strong>ಕೋಲ್ಕತ್ತ: </strong>‘ನಮ್ಮ ರಾಜ್ಯಕ್ಕೆ ಭೇಟಿ ನೀಡಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಸಿಹಿ, ಹೂ ಗುಚ್ಛಗಳನ್ನು ನೀಡಿ ಸ್ವಾಗತಿಸಿ. ಆದರೆ, ಯಾವುದೇ ಗಲಭೆಗಳು ನಡೆಯದಂತೆ ಎಚ್ಚರವಹಿಸಿ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ.</p>.<p>ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿರುವ ಮಮತಾ, ‘ಆರ್ಎಸ್ಎಸ್ ಮುಖ್ಯಸ್ಥರ ವಾಸ್ತವ್ಯದ ಉದ್ದೇಶವೇನು’ ಎಂದು ಪ್ರಶ್ನಿಸಿದ್ದಾರೆ.</p>.<p><strong>ಓದಿ...<a href="https://www.prajavani.net/karnataka-news/karnataka-assembly-elections-family-politics-hd-kumaraswamy-hd-deve-gowda-jds-bjp-congress-937754.html" target="_blank">ಭಾರತಕ್ಕೆ ನೆಹರೂ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಪಿತಾಮಹ: ಬಿಜೆಪಿ ಟೀಕೆ</a></strong></p>.<p>‘ಸರ್ಕಾರದ ಪರವಾಗಿ ನೀವು (ಅಧಿಕಾರಿಗಳು) ಅವರಿಗೆ ಸಿಹಿ ತಿಂಡಿ ಮತ್ತು ಹೂ ಗುಚ್ಛ, ಹಣ್ಣುಗಳನ್ನು ಕಳುಹಿಸಬಹುದು. ಅತಿಥಿಗಳನ್ನು ನಾವು ಎಷ್ಟು ಸೌಹಾರ್ದಯುತವಾಗಿ ನಡೆಸಿಕೊಳ್ಳುತ್ತೇವೆ ಎಂಬುದನ್ನು ಅವರು ಅರಿತುಕೊಳ್ಳಲಿ’ ಎಂದು ಮಮತಾ ವ್ಯಂಗ್ಯವಾಡಿದ್ದಾರೆ.</p>.<p>ಮೋಹನ್ ಭಾಗವತ್ಗೆ ಸೂಕ್ತ ರಕ್ಷಣೆ ಒದಗಿಸಿ. ಯಾವುದೇ ಗಲಭೆಗಳು ನಡೆಯದಂತೆ ನೋಡಿಕೊಳ್ಳಿ’ ಎಂದು ಪೊಲೀಸ್ ಅಧಿಕಾರಿಗಳಿಗೆ ಬ್ಯಾನರ್ಜಿ ಸೂಚಿಸಿದ್ದಾರೆ.</p>.<p><strong>ಓದಿ...<a href="https://www.prajavani.net/karnataka-news/pm-narendra-modi-and-other-prominent-leaders-greeting-hd-deve-gowda-birthday-937731.html" target="_blank">90ನೇ ವಸಂತಕ್ಕೆ ಕಾಲಿಟ್ಟ ಎಚ್.ಡಿ.ದೇವೇಗೌಡ: ಮೋದಿ ಸೇರಿ ಗಣ್ಯರಿಂದ ಶುಭಾಶಯ</a></strong></p>.<p>ಮಮತಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಆರ್ಎಸ್ಎಸ್ ಕಾರ್ಯಕಾರಿ ದೇಬಾಸಿಸ್ ಚೌಧರಿ, ‘ಮಮತಾ ಬ್ಯಾನರ್ಜಿ ಅವರು ನಮ್ಮ ಸಾಮಾಜಿಕ-ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಹೆಚ್ಚು ಆಸಕ್ತಿವಹಿಸುತ್ತಿರುವುದು ಕುತೂಹಲ ಮೂಡಿಸುತ್ತಿದೆ. ಇದೇ ವೇಳೆ ಇಸ್ಲಾಮಿಕ್ ಸಂಘಟನೆಗಳು ನಡೆಸುತ್ತಿರುವ ತಬ್ಲೀಗ್ ಜಮಾತ್ ಶಿಬಿರಗಳಿಗೆ ಭೇಟಿ ನೀಡುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ’ ಎಂದು ಆಗ್ರಹಿಸಿದ್ದಾರೆ.</p>.<p>ಮಮತಾ ಬ್ಯಾನರ್ಜಿಯವರು ಒಂದು ಬಾರಿ ಆರ್ಎಸ್ಎಸ್ ಶಿಬಿರಕ್ಕೆ ಭೇಟಿ ನೀಡಿದರೆ ಒಳ್ಳೆಯದು ಎಂದು ಚೌಧರಿ ಹೇಳಿದ್ದಾರೆ.</p>.<p>ಬಂಗಾಳದ ಮಿಡ್ನಾಪುರ ಜಿಲ್ಲೆಯ ಕೇಶಿಯಾರಿದಲ್ಲಿ ಮೇ 17ರಿಂದ ಮೇ 20ರವರೆಗೆ ತರಬೇತಿ ಶಿಬಿರ ನಡೆಯಲಿದೆ. 4 ದಿನಗಳ ಕಾಲ ನಡೆಯಲಿರುವ ಈ ಶಿಬಿರದಲ್ಲಿ ಮೋಹನ್ ಭಾಗವತ್ ಉಪಸ್ಥಿತರಿರಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>‘ನಮ್ಮ ರಾಜ್ಯಕ್ಕೆ ಭೇಟಿ ನೀಡಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಸಿಹಿ, ಹೂ ಗುಚ್ಛಗಳನ್ನು ನೀಡಿ ಸ್ವಾಗತಿಸಿ. ಆದರೆ, ಯಾವುದೇ ಗಲಭೆಗಳು ನಡೆಯದಂತೆ ಎಚ್ಚರವಹಿಸಿ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪೊಲೀಸರಿಗೆ ಸೂಚನೆ ನೀಡಿದ್ದಾರೆ.</p>.<p>ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿರುವ ಮಮತಾ, ‘ಆರ್ಎಸ್ಎಸ್ ಮುಖ್ಯಸ್ಥರ ವಾಸ್ತವ್ಯದ ಉದ್ದೇಶವೇನು’ ಎಂದು ಪ್ರಶ್ನಿಸಿದ್ದಾರೆ.</p>.<p><strong>ಓದಿ...<a href="https://www.prajavani.net/karnataka-news/karnataka-assembly-elections-family-politics-hd-kumaraswamy-hd-deve-gowda-jds-bjp-congress-937754.html" target="_blank">ಭಾರತಕ್ಕೆ ನೆಹರೂ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಪಿತಾಮಹ: ಬಿಜೆಪಿ ಟೀಕೆ</a></strong></p>.<p>‘ಸರ್ಕಾರದ ಪರವಾಗಿ ನೀವು (ಅಧಿಕಾರಿಗಳು) ಅವರಿಗೆ ಸಿಹಿ ತಿಂಡಿ ಮತ್ತು ಹೂ ಗುಚ್ಛ, ಹಣ್ಣುಗಳನ್ನು ಕಳುಹಿಸಬಹುದು. ಅತಿಥಿಗಳನ್ನು ನಾವು ಎಷ್ಟು ಸೌಹಾರ್ದಯುತವಾಗಿ ನಡೆಸಿಕೊಳ್ಳುತ್ತೇವೆ ಎಂಬುದನ್ನು ಅವರು ಅರಿತುಕೊಳ್ಳಲಿ’ ಎಂದು ಮಮತಾ ವ್ಯಂಗ್ಯವಾಡಿದ್ದಾರೆ.</p>.<p>ಮೋಹನ್ ಭಾಗವತ್ಗೆ ಸೂಕ್ತ ರಕ್ಷಣೆ ಒದಗಿಸಿ. ಯಾವುದೇ ಗಲಭೆಗಳು ನಡೆಯದಂತೆ ನೋಡಿಕೊಳ್ಳಿ’ ಎಂದು ಪೊಲೀಸ್ ಅಧಿಕಾರಿಗಳಿಗೆ ಬ್ಯಾನರ್ಜಿ ಸೂಚಿಸಿದ್ದಾರೆ.</p>.<p><strong>ಓದಿ...<a href="https://www.prajavani.net/karnataka-news/pm-narendra-modi-and-other-prominent-leaders-greeting-hd-deve-gowda-birthday-937731.html" target="_blank">90ನೇ ವಸಂತಕ್ಕೆ ಕಾಲಿಟ್ಟ ಎಚ್.ಡಿ.ದೇವೇಗೌಡ: ಮೋದಿ ಸೇರಿ ಗಣ್ಯರಿಂದ ಶುಭಾಶಯ</a></strong></p>.<p>ಮಮತಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಆರ್ಎಸ್ಎಸ್ ಕಾರ್ಯಕಾರಿ ದೇಬಾಸಿಸ್ ಚೌಧರಿ, ‘ಮಮತಾ ಬ್ಯಾನರ್ಜಿ ಅವರು ನಮ್ಮ ಸಾಮಾಜಿಕ-ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಹೆಚ್ಚು ಆಸಕ್ತಿವಹಿಸುತ್ತಿರುವುದು ಕುತೂಹಲ ಮೂಡಿಸುತ್ತಿದೆ. ಇದೇ ವೇಳೆ ಇಸ್ಲಾಮಿಕ್ ಸಂಘಟನೆಗಳು ನಡೆಸುತ್ತಿರುವ ತಬ್ಲೀಗ್ ಜಮಾತ್ ಶಿಬಿರಗಳಿಗೆ ಭೇಟಿ ನೀಡುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ’ ಎಂದು ಆಗ್ರಹಿಸಿದ್ದಾರೆ.</p>.<p>ಮಮತಾ ಬ್ಯಾನರ್ಜಿಯವರು ಒಂದು ಬಾರಿ ಆರ್ಎಸ್ಎಸ್ ಶಿಬಿರಕ್ಕೆ ಭೇಟಿ ನೀಡಿದರೆ ಒಳ್ಳೆಯದು ಎಂದು ಚೌಧರಿ ಹೇಳಿದ್ದಾರೆ.</p>.<p>ಬಂಗಾಳದ ಮಿಡ್ನಾಪುರ ಜಿಲ್ಲೆಯ ಕೇಶಿಯಾರಿದಲ್ಲಿ ಮೇ 17ರಿಂದ ಮೇ 20ರವರೆಗೆ ತರಬೇತಿ ಶಿಬಿರ ನಡೆಯಲಿದೆ. 4 ದಿನಗಳ ಕಾಲ ನಡೆಯಲಿರುವ ಈ ಶಿಬಿರದಲ್ಲಿ ಮೋಹನ್ ಭಾಗವತ್ ಉಪಸ್ಥಿತರಿರಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>